Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:32 - ಕನ್ನಡ ಸತ್ಯವೇದವು C.L. Bible (BSI)

32 ಶುದ್ಧೀಕರಣ ಬಲಿಗಳನ್ನು ಅರ್ಪಿಸುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿಯನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಶುದ್ಧೀಕರಣಯಜ್ಞಗಳನ್ನು ಮಾಡುವದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಚರ್ಮರೋಗದಿಂದ ವಾಸಿಯಾದವನನ್ನು ಶುದ್ಧೀಕರಿಸುವ ನಿಯಮಗಳು ಇವೇ. ಶುದ್ಧರಾಗಲು ವಿಧಿಬದ್ಧವಾದ ಯಜ್ಞಗಳನ್ನು ಅರ್ಪಿಸುವುದಕ್ಕೆ ಶಕ್ತರಲ್ಲದ ಜನರಿಗೋಸ್ಕರವಿರುವ ನಿಯಮಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಚರ್ಮರೋಗವುಳ್ಳವನು ಶುದ್ಧತೆ ಮಾಡಿಸಿಕೊಳ್ಳಲು ಗತಿಯಿಲ್ಲದವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:32
12 ತಿಳಿವುಗಳ ಹೋಲಿಕೆ  

ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಅಶಕ್ತನಾಗಿದ್ದರೆ ಪ್ರಾಯಶ್ಚಿತ್ತ ಬಲಿಗಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳಲು (ಯಾಜಕನ ಕೈಯಿಂದ) ನೈವೇದ್ಯವಾಗಿ ಆರತಿಯೆತ್ತಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂದು ಕಿಲೋಗ್ರಾಂ ಗೋಧಿ ಹಿಟ್ಟನ್ನೂ ಸುಮಾರು ಕಾಲು ಲೀಟರ್ ಎಣ್ಣೆಯನ್ನೂ ತರಬೇಕು.


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಹೀನ ಸ್ಥಿತಿಯಲ್ಲಿದ್ದ ನಮ್ಮನ್ನು ಜ್ಞಾಪಿಸಿಕೊಂಡಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯದಲ್ಲಿ ಅನುಸರಿಸಬೇಕಾದ ಕ್ರಮ ಇದು: ಅವನನ್ನು ಯಾಜಕನಿಗೆ ತೋರಿಸಬೇಕು.


ಉಣ್ಣೇ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು.


ಒಬ್ಬ ವ್ಯಕ್ತಿಯ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ, ಹೊಳೆಯುವ ಮಚ್ಚೆಯಾಗಲಿ ಕಾಣಿಸಿಕೊಂಡು ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕ ಆರೋನನ ಬಳಿಗೆ, ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.


ಪಾರಿವಾಳದ ಮರಿಗಳಲ್ಲಿಯಾಗಲಿ ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಿಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.


ಸರ್ವೇಶ್ವರಸ್ವಾಮಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು