Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:12 - ಕನ್ನಡ ಸತ್ಯವೇದವು C.L. Bible (BSI)

12 ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳ ಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಆ ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:12
13 ತಿಳಿವುಗಳ ಹೋಲಿಕೆ  

ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು.


ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


ಅದರಂತೆ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಬಂದು, ಅವುಗಳಲ್ಲಿ ಕೆಂಡವನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆ ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತುಕೊಂಡರು.


ಪಟ್ಟಾಭಿಷೇಕ ತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.


ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


ಅನಂತರ ಆ ದೇವದೂತನು ಧೂಪಾರತಿಯನ್ನು ಎತ್ತಿಕೊಂಡು, ಅದನ್ನು ಬಲಿಪೀಠದ ಮೇಲಿದ್ದ ಕೆಂಡಗಳಿಂದ ತುಂಬಿಸಿ, ಭೂಮಿಗೆ ಎಸೆದನು. ಆಗ ಮಿಂಚು, ಗುಡುಗು, ಗರ್ಜನೆಗಳು ಮತ್ತು ಭೂಕಂಪವು ಉಂಟಾದವು.


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು