Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:15 - ಕನ್ನಡ ಸತ್ಯವೇದವು C.L. Bible (BSI)

15 ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತರುವಾಯ ಅವನು ಜನರಿಗೋಸ್ಕರವಾದ ದೋಷಪರಿಹಾರಕಯಜ್ಞದ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿವಿುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:15
15 ತಿಳಿವುಗಳ ಹೋಲಿಕೆ  

ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಅದರ ಎರಡನೆಯ ಭಾಗಕ್ಕೆ ಗರ್ಭಗುಡಿ ಎಂದು ಹೆಸರು. ಈ ಎರಡು ಭಾಗಗಳ ನಡುವೆ ತೆರೆಯಿತ್ತು. ಗರ್ಭಗುಡಿಯನ್ನು ಈ ತೆರೆ ಮರೆಮಾಡಿತ್ತು.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.


ಜನರಿಗೋಸ್ಕರ ಹೇಗೋ ಹಾಗೆಯೇ ತನ್ನ ದೌರ್ಬಲ್ಯದ ನಿಮಿತ್ತ ತನಗೋಸ್ಕರವೂ ಆತನು ಪಾಪಪರಿಹಾರಕಬಲಿಯನ್ನು ಅರ್ಪಿಸಬೇಕಾಗಿದೆ.


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.


ಹೋತಹೋರಿಗಳ ರಕ್ತವನ್ನೂ ಯಜ್ಞಪಶುಗಳ ಬೂದಿಯನ್ನೂ ಮಲಿನರಾದವರ ಮೇಲೆ ಚಿಮುಕಿಸುವುದರ ಮೂಲಕ ಶಾರೀರಕ ಮೈಲಿಗೆಯನ್ನು ಹೋಗಲಾಡಿಸಿ ಅವರನ್ನು ಪರಿಶುದ್ಧಗೊಳಿಸಬಹುದಾದರೆ,


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ.


ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು;


ಸರ್ವೇಶ್ವರನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.


ಅಮಾವಾಸ್ಯೆಯಲ್ಲಿ ದಹನಬಲಿಯನ್ನೂ ಅರ್ಪಿಸುವುದಲ್ಲದೆ ಪಾಪಪರಿಹಾರಕಬಲಿಗಾಗಿ ಒಂದು ಹೋತವನ್ನು ಸರ್ವೇಶ್ವರನಿಗೆ ಹೆಚ್ಚಾಗಿ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು