Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:16 - ಕನ್ನಡ ಸತ್ಯವೇದವು C.L. Bible (BSI)

16 ಹೀಗೆ ಇಸ್ರಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೂ ಹಾಗೆಯೇ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗೆ ಇಸ್ರಾಯೇಲ್ಯರು ನಾನಾ ವಿಧವಾದ ಅಪರಿಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಹಾಗೆಯೇ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇಸ್ರಾಯೇಲರ ಅಶುದ್ಧತ್ವದ ನಿಮಿತ್ತವಾಗಿಯೂ, ಎಲ್ಲಾ ಅಪರಾಧಗಳಿಗಾಗಿಯೂ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಅವರು ಅಶುದ್ಧತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ದೇವದರ್ಶನದ ಗುಡಾರಕ್ಕೂ ಅದರಂತೆಯೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:16
12 ತಿಳಿವುಗಳ ಹೋಲಿಕೆ  

ತರುವಾಯ ಅವನು ಹೊರಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿರುವ ಬಲಿಪೀಠದ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲೂ ಆ ಹೋತದ ರಕ್ತದಲ್ಲೂ ಸ್ವಲ್ಪ ಸ್ವಲ್ಪತೆಗೆದುಕೊಂಡು ಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.


ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದೊಳಗೆ ಹೋಗಕೂಡದು. ಹಾಗೆ ತನ್ನ ಹಾಗು ಮನೆತನದವರ ಪರವಾಗಿ ಮತ್ತು ಇಸ್ರಯೇಲರ ಇಡೀ ಸಮಾಜದ ಪರವಾಗಿ ಪ್ರಾಯಶ್ಚಿತ್ತ ಮಾಡುವನು.


“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.


ಸರ್ವೇಶ್ವರನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.


ಅಮಾವಾಸ್ಯೆಯಲ್ಲಿ ದಹನಬಲಿಯನ್ನೂ ಅರ್ಪಿಸುವುದಲ್ಲದೆ ಪಾಪಪರಿಹಾರಕಬಲಿಗಾಗಿ ಒಂದು ಹೋತವನ್ನು ಸರ್ವೇಶ್ವರನಿಗೆ ಹೆಚ್ಚಾಗಿ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು