Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:10 - ಕನ್ನಡ ಸತ್ಯವೇದವು C.L. Bible (BSI)

10 “ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:10
25 ತಿಳಿವುಗಳ ಹೋಲಿಕೆ  

ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.


“ಆದರೆ ರಕ್ತ ಜೀವಾಧಾರವಾದುದರಿಂದ ಮಾಂಸದೊಡನೆ ರಕ್ತವನ್ನು ಸೇವಿಸಲೇಕೂಡದೆಂಬುದನ್ನು ಜ್ಞಾಪಕದಲ್ಲಿಡಿ. ಮಾಂಸದೊಡನೆ ಅದರ ಜೀವಾಧಾರವನ್ನು ತಿನ್ನಬಾರದು.


ರಕ್ತವನ್ನು ಮಾತ್ರ ಸೇವಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”


“ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು.


ಆಗ ಕೆಲವರು ಸೌಲನಿಗೆ, “ನೋಡಿ, ಜನರು ರಕ್ತವನ್ನು ಭುಜಿಸಿ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡುತ್ತಿದ್ದಾರೆ,” ಎಂದು ತಿಳಿಸಿದರು. ಅವನು, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ಒಂದು ದೊಡ್ಡ ಕಲ್ಲನ್ನು ಹೊರಳಿಸಿ ತಂದಿಡಿ;


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.


ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II


ನೀವು ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


“ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ.


“ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?


ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಆದ್ದರಿಂದ ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸದೊಡನೆ ರಕ್ತವನ್ನೂ ತಿಂದರು.


“ಸರ್ವೇಶ್ವರಾ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ.ಇದು ಜೀವದಾಶೆ ತೊರೆದವರ ರಕ್ತ; ಇದನ್ನು ಕುಡಿಯುವುದೇ ಇಲ್ಲ,” ಎಂದು ಹೇಳಿ ಅದನ್ನು ಸರ್ವೇಶ್ವರನಿಗೆ ಸಮರ್ಪಣೆಯಾಗಿ ಹೊರಗೆ ಹೊಯ್ದುಬಿಟ್ಟನು. ಆ ಮೂರುಮಂದಿ ಪರಾಕ್ರಮಿಗಳ ಕೃತ್ಯಗಳಿವು.


ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು