Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:15 - ಕನ್ನಡ ಸತ್ಯವೇದವು C.L. Bible (BSI)

15 “ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಾನಾಗಿ ಸತ್ತು ಬಿದ್ದದ್ದನ್ನಾಗಲಿ ಕಾಡುಮೃಗಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾದರೂ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತ ಪ್ರಾಣಿಯನ್ನು ತಿಂದರೆ ಅಥವಾ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:15
22 ತಿಳಿವುಗಳ ಹೋಲಿಕೆ  

“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ತಾನಾಗಿ ಸತ್ತುಬಿದ್ದದ್ದನ್ನು ಅಥವಾ ಕಾಡುಮೃಗ ಕೊಂದದ್ದನ್ನು ಅವನು ತಿಂದು ಅಪವಿತ್ರ ಮಾಡಿಕೊಳ್ಳಬಾರದು. ನಾನು ಸರ್ವೇಶ್ವರ.


“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಕಾಡುಮೃಗ ಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು, ಮತ್ತು ಸಾಂಯಂಕಾಲದವರೆಗೂ ಅಶುದ್ಧನಾಗಿರುವನು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.”


ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.


“ಇದು ಇಸ್ರಯೇಲರಿಗೆ ಶಾಶ್ವತ ನಿಯಮವಾಗಿರುತ್ತದೆ. ಮೈಲಿಗೆ ನೀಗಿಸುವ ಆ ನೀರನ್ನು ಚಿಮುಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಆ ನೀರನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೂ ಮಡಿಗೆಟ್ಟವನಾಗಿರುವನು.


ಮೂರನೆಯ ದಿನದಲ್ಲೂ ಏಳನೆಯ ದಿನದಲ್ಲೂ ಮಡಿಗೆಟ್ಟವನ ಮೇಲೆ ಹಾಗೆಯೇ ಚಿಮುಕಿಸಬೇಕು. ಮಡಿಗೆಟ್ಟವನು ಏಳನೆಯ ದಿನ ದೋಷಪರಿಹಾರ ಹೊಂದುವನು. ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಕೊಂಡು ಸಂಜೆ ಶುದ್ಧನಾಗುವನು.


ಆ ಆಕಳನ್ನು ಸುಟ್ಟವನು ಕೂಡ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನ ಮಾಡಿ ಆ ದಿನದ ಸಂಜೆಯ ತನಕ ಮಡಿಗೆಟ್ಟವನಾಗಿರಬೇಕು.


ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.


ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಅಂಥ ಪ್ರಾಣಿ ರೋಗದಿಂದ ಸತ್ತರೆ, ಇಲ್ಲವೆ ಕಾಡುಮೃಗದಿಂದ ಕೊಲ್ಲಲ್ಪಟ್ಟರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಿಕೊಳ್ಳಬಹುದು; ಆದರೆ ಎಷ್ಟು ಮಾತ್ರಕ್ಕೂ ತಿನ್ನಬಾರದು.


ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


“ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ಇದಲ್ಲದೆ ಈ ಕೆಳಗೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವುವುಗಳೆಲ್ಲಾ ನಿಮಗೆ ಅಶುದ್ಧವಾಗಿರುವುವು. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವುದೋ ಅವರು ಸಾಯಂಕಾಲದವರೆಗೂ ಅಶುದ್ಧರಾಗಿರುವರು.


ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.


ಆಹಾರಕ್ಕೆ ಯೋಗ್ಯವಾಗಿರುವ ಪ್ರಾಣಿ ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು