Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:5 - ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕಂದರೆ ಯಜ್ಞಪಶುಗಳನ್ನು ಬೈಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲ್ಯರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತಂದು ಯೆಹೋವನ ಮುಂದೆ ಸಮಾಧಾನಯಜ್ಞರೂಪವಾಗಿ ಯೆಹೋವನಿಗೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಮಾಧಾನಯಜ್ಞರೂಪವಾಗಿ ಇದನ್ನು ಯೆಹೋವನಿಗೆ ಅರ್ಪಿಸುವ ಯಜ್ಞಕ್ಕೆ ಇದೇ ನಿಯಮ. ಇಸ್ರೇಲರು ಹೊಲಗಳಲ್ಲಿ ಕೊಲ್ಲುವ ತಮ್ಮ ಪ್ರಾಣಿಗಳನ್ನು ದೇವದರ್ಶನಗುಡಾರದ ಬಾಗಿಲಿಗೆ ಅಂದರೆ ಯೆಹೋವನ ಸನ್ನಿಧಿಯಲ್ಲಿರುವ ಯಾಜಕರ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:5
20 ತಿಳಿವುಗಳ ಹೋಲಿಕೆ  

ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


ಪೂಜಾಸ್ಥಳಗಳಲ್ಲೂ, ದಿನ್ನೆಗಳ ಮೇಲೂ ಹಾಗು ಎಲ್ಲ ಹಸಿರು ಮರಗಳ ಕೆಳಗೂ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದನು.


ಎಲ್ಲಾ ದಿಣ್ಣೆಗಳ ಮೇಲೆ ಮತ್ತು ಎಲ್ಲಾ ಹಸಿರು ಮರಗಳ ಕೆಳಗೆ ಕಲ್ಲುಗಂಬ, ಅಶೇರುವಿಗ್ರಹಸ್ಥಂಭ ಇವುಗಳನ್ನು ಸ್ಥಾಪಿಸಿದರು.


ಪೂಜಾಸ್ಥಳಗಳಲ್ಲೂ ದಿಣ್ಣೆಗಳ ಮೇಲೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಧೂಪಗಳನ್ನು ಸಮರ್ಪಿಸಿದನು.


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


“ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.


ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.


ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.


ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು


ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಬಲಿಪೀಠಕ್ಕೆ ಚಿಮುಕಿಸಿ, ಅವುಗಳ ಕೊಬ್ಬನ್ನು ಹೋಮಮಾಡಿ, ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಬೇಕು.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿ‍ಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ಅಲ್ಲಿಯವರೆಗೂ ಸರ್ವೇಶ್ವರಸ್ವಾಮಿಯ ನಾಮಕ್ಕೋಸ್ಕರ ಆಲಯವೇ ಇರಲಿಲ್ಲ. ಆದುದರಿಂದ ಜನರು ಪೂಜಾಸ್ಥಳಗಳಲ್ಲಿ ಬಲಿಯರ್ಪಣೆ ಮಾಡುತ್ತಿದ್ದರು.


ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು