Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:8 - ಕನ್ನಡ ಸತ್ಯವೇದವು C.L. Bible (BSI)

8 “ಇದಲ್ಲದೆ ನೀನು ಅವರಿಗೆ ಹೀಗೆಂದು ಆಜ್ಞಾಪಿಸು: ಇಸ್ರಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಿ ಆಗಲಿ ಯಾವನಾದರು ದಹನಬಲಿಯನ್ನು ಆಥವಾ ಬೇರೆ ವಿಧವಾದ ಬಲಿದಾನ ಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು ನೀನು ಅವರಿಗೆ ಹೀಗೆ ಆಜ್ಞಾಪಿಸು - ಇಸ್ರಾಯೇಲ್ಯರಲ್ಲಿ ಆಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಸರ್ವಾಂಗಹೋಮವನ್ನು ಅಥವಾ ಬೇರೆ ವಿಧವಾದ ಯಜ್ಞವನ್ನು ಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಜನರಿಗೆ ಹೇಳಬೇಕಾದದ್ದೇನೆಂದರೆ: ನಿಮ್ಮ ಮಧ್ಯದಲ್ಲಿ ವಾಸಿಸುತ್ತಿರುವ ಯಾವ ಇಸ್ರೇಲನಾಗಲಿ ಅನ್ಯನಾಗಲಿ ಸರ್ವಾಂಗಹೋಮವನ್ನಾಗಲಿ ಯಜ್ಞವನ್ನಾಗಲಿ ಅರ್ಪಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರು ಇಲ್ಲವೆ ನಿಮ್ಮೊಳಗೆ ಪ್ರವಾಸಿಗರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:8
16 ತಿಳಿವುಗಳ ಹೋಲಿಕೆ  

“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.


ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ?’ ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು.


ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದ ನಂತರ ನಾನು ದಹನಬಲಿಗಳನ್ನೂ ಶಾಂತಿಸಮಾಧಾನಬಲಿಗಳನ್ನೂ ಸಮರ್ಪಿಸುವುದಕ್ಕಾಗಿ ಅಲ್ಲಿಗೆ ಬಂದು ನೀನು ಮಾಡಬೇಕಾದುದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು,” ಎಂದು ಹೇಳಿದನು.


ಆಗ ಸಮುವೇಲನು ಹಾಲುಕುಡಿಯುವ ಒಂದು ಕುರಿಮರಿಯನ್ನು ತಂದು ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸಿ, ಇಸ್ರಯೇಲರ ಪರವಾಗಿ ಪ್ರಾರ್ಥನೆಮಾಡಿದನು. ಸರ್ವೇಶ್ವರ ಸದುತ್ತರವನ್ನು ದಯಪಾಲಿಸಿದರು.


ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು.


“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.


ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು


“ಅದು ಕುರಿಯಾಗಿದ್ದರೆ ತಂದವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬಂದು ಅದರ ತಲೆಯ ಮೇಲೆ ಕೈಯಿಟ್ಟು


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.


ಆ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತರದಿದ್ದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು ಇಸ್ರಯೇಲ್ ನಾಡಾದ ಕಾನಾನಿನ ಪೂರ್ವಕ್ಕಿರುವ ಜೋರ್ಡನ್ ನದಿಯ ತೀರಪ್ರದೇಶದಲ್ಲಿ ಬಲಿಪೀಠವನ್ನು ಕಟ್ಟಿದ್ದಾರೆಂಬ ಸುದ್ದಿ ಮಿಕ್ಕ ಇಸ್ರಯೇಲರಿಗೆ ಮುಟ್ಟಿತು.


ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,


“ಸರ್ವೇಶ್ವರನ ಸರ್ವಸಭೆ ಹೇಳುವ ಮಾತಿದು: ನೀವು ಇಸ್ರಯೇಲ್ ದೇವರಿಗೆ ವಿರುದ್ಧ ಇಂಥ ದ್ರೋಹ ಮಾಡಿದ್ದೇಕೆ? ನೀವು ನಿಮಗಾಗಿಯೇ ಒಂದು ಬಲಿಪೀಠವನ್ನು ಕಟ್ಟಿಕೊಂಡಿದ್ದೀರಿ. ಇದರಿಂದ ನೀವು ಸರ್ವೇಶ್ವರನಿಗೆ ವಿಮುಖವಾದಂತಾಯಿತು; ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು