Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:25 - ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಅವರ ನಾಡು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ. ಆ ನಾಡು ತನ್ನಲ್ಲಿ ವಾಸಿಸಿದವರನ್ನು ಕಕ್ಕಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರ ದೇಶವು ಅಶುದ್ಧವಾಗಿ ಹೋದದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸಿದವರನ್ನು ಕಾರಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:25
25 ತಿಳಿವುಗಳ ಹೋಲಿಕೆ  

ನಿಮಗಿಂತ ಮುಂಚೆಯಿದ್ದ ಜನಾಂಗಗಳನ್ನು ಆ ನಾಡು ಕಕ್ಕಿಬಿಟ್ಟ ಪ್ರಕಾರವೇ ಅದು ನಿಮ್ಮಿಂದ ಅದು ಮಲಿನವಾದರೆ ನಿಮ್ಮನ್ನೂ ಅಂತೆಯೇ ಕಕ್ಕಿಬಿಡುವುದು.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ಇಂಥವುಗಳಿಗಾಗಿ ನಾನು ಅವರನ್ನು ಹಿಂಸಿಸಬಾರದೆ? ಇಂಥ ಜನಾಂಗದ ಮೇಲೆ ಸೇಡನ್ನು ತೀರಿಸಿಕೊಳ್ಳದಿರುವೆನೆ?”


ಸುರಿಸಿದರು ತಮ್ಮ ಮಕ್ಕಳ ನಿರ್ದೋಷ ರಕ್ತವನು I ಬಲಿಕೊಟ್ಟರು ಕಾನಾನ್ಯರ ವಿಗ್ರಹಗಳಿಗೆ ಅವರನು I ಹೊಲೆಮಾಡಿದರಂಥ ಕೊಲೆಗಳಿಂದ ದೇಶವನು II


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ : “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.


ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”


“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.


ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ಇಂಥ ಕೆಲಸಗಳನ್ನು ನಡೆಸುವವರು ಸರ್ವೇಶ್ವರನಿಗೆ ಅಸಹ್ಯರಾಗಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ದೂರ ಹೊರದೂಡಿಸಿಬಿಡುತ್ತಾರೆ.


ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ.


ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.


ದಂಡಿಸುವೆನವರ ದ್ರೋಹವನು ದಂಡದಿಂದ I ಶಿಕ್ಷಿಸುವೆನವರ ಅಪರಾಧವನು ಚಾಟಿಯಿಂದ II


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಿಸುವ ಅನ್ಯದೇಶೀಯರಲ್ಲಾಗಲಿ ಯಾರೂ ಇಂಥ ಹೇಸಿಗೆಯಾದ ಕಾರ್ಯಗಳಲ್ಲಿ ಒಂದನ್ನೂ ಮಾಡದೆ ಎಲ್ಲರೂ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು.


ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು.


ನೀವು ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ನಾಡು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು