Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:14 - ಕನ್ನಡ ಸತ್ಯವೇದವು C.L. Bible (BSI)

14 ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎರಡು ಕಲ್ಲನ್ನು ಇಡಬೇಡ, ನಿನ್ನ ದೇವರಲ್ಲಿ ಭಯಭಕ್ತಿಯಿರಲಿ, ನಾನೇ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವು ಕಿವುಡನನ್ನು ಶಪಿಸಬಾರದು. ಕುರುಡನು ಬೀಳುವಂತೆ ನೀವು ಅವನ ಮುಂದೆ ಅಡ್ಡವಾಗಿ ಏನನ್ನೂ ಇಡಬಾರದು. ಆದರೆ ನೀವು ನಿಮ್ಮ ದೇವರನ್ನು ಸನ್ಮಾನಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:14
14 ತಿಳಿವುಗಳ ಹೋಲಿಕೆ  

“ಅವರು, ‘ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ.


ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರನು.


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ. ಹೌದು, ಶಪಿಸದೆ ಆಶೀರ್ವದಿಸಿರಿ.


ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ.


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು