Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:31 - ಕನ್ನಡ ಸತ್ಯವೇದವು C.L. Bible (BSI)

31 “ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಬೇಡ; ಅವರ ಆಲೋಚನೆಯನ್ನು ಕೇಳಿ ಅಶುದ್ಧನಾಗಬೇಡ. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಸಲಹೆಗಾಗಿ, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಅಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:31
22 ತಿಳಿವುಗಳ ಹೋಲಿಕೆ  

‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.


ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಸಮುವೇಲನು ಮರಣಹೊಂದಿದ್ದನು. ಇಸ್ರಯೇಲರು ಅವನಿಗಾಗಿ ಸಂತಾಪ ಸೂಚಿಸುತ್ತಾ ಅವನ ಶವವನ್ನು ಅವನ ಸ್ವಂತ ಊರಾದ ರಾಮಾದಲ್ಲಿ ಸಮಾಧಿಮಾಡಿದ್ದರು. ಸೌಲನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೇತಾಳಿಕರನ್ನೂ ನಾಡಿನಿಂದ ಹೊರಡಿಸಿಬಿಟ್ಟಿದ್ದನು.


ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು.


ನೀನು ಕುಗ್ಗಿ ಭೂಮಿಯೊಳಗಿಂದ ಮಾತಾಡುವೆ. ನಿನ್ನ ನುಡಿ ಮಣ್ಣಿನೊಳಗಿಂದ ಶಿಥಿಲ ಸ್ವರವಾಗಿ ಹೊರಡುವುದು. ನಿನ್ನ ಧ್ವನಿ ಭೂತದ ಧ್ವನಿಯಂತೆ ನೆಲದೊಳಗಿಂದ ಬರುವುದು. ಧೂಳಿನೊಳಗಿಂದ ನಿನ್ನ ಮಾತು ಲೊಚಗುಟ್ಟುವಂತೆ ಕೇಳಿಸುವುದು.


“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು.


ಬಹುಕಾಲದಿಂದ ಇವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಬೆಲೆಕೊಡುತ್ತಿದ್ದರು.


“ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ.


ಇದಲ್ಲದೆ, ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೈತಾಳಿಕರನ್ನೂ ಜೆರುಸಲೇಮ್, ಜುದೇಯ ಪ್ರಾಂತ್ಯಗಳಲ್ಲಿದ್ದ ಎಲ್ಲಾ ತೆರಫೀಮ್ ಎಂಬ ಮನೆದೇವರುಗಳು, ಮೂರ್ತಿಗಳು ಹಾಗು ಎಲ್ಲ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯಾಜಕ ಹಿಲ್ಕೀಯನಿಗೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶ ಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು