Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:26 - ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದದರಿಂದ ನೀವು ನನಗೆ ಮೀಸಲಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು ಮತ್ತು ನಾನು ಪರಿಶುದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:26
19 ತಿಳಿವುಗಳ ಹೋಲಿಕೆ  

ನಾನು ನಿಮ್ಮ ದೇವರಾದ ಸರ್ವೇಶ್ವರನಾಗಿರುವ ಕಾರಣ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.


ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.


ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪವಿತ್ರಜನರಾಗುವಂತೆ ಮಾಡುವ ಸರ್ವೇಶ್ವರ.


ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು