Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:12 - ಕನ್ನಡ ಸತ್ಯವೇದವು C.L. Bible (BSI)

12 ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವಮಂದಿರದ ಗೌರವಕ್ಕೆ ಕುಂದುಬರುವುದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವಿಸುವ ದೇವರ ಮಂದಿರದ ಗೌರವಕ್ಕೆ ಕುಂದುಬರುವದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ಮತ್ತು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:12
9 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಅಭಿಷೇಕತೈಲ ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು, ಹೋದರೆ ಸಾಯುವಿರಿ,” ಎಂದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.


“ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಬಳಿಕ ಮೋಶೆ ಅಭಿಷೇಕ ಎಣ್ಣೆಯಿಂದಲೂ ಬಲಿಪೀಠದ ಮೇಲಿದ್ದ ರಕ್ತದಿಂದಲೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೂ ಚಿಮುಕಿಸಿದನು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠಿಸಿದನು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮಾಡಿಕೊಳ್ಳಬೇಕೇ ಹೊರತು


ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಯಾವ ಶವವನ್ನು ಮುಟ್ಟಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು