Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:22 - ಕನ್ನಡ ಸತ್ಯವೇದವು C.L. Bible (BSI)

22 ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದುದನ್ನೂ ಮಹಾಪರಿಶುದ್ಧವಾದುದನ್ನೂ ಅವನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನೂ ಮಹಾಪರಿಶುದ್ಧವಾದದ್ದನ್ನೂ ಅವನು ಊಟಮಾಡಬಹುದೇ ಹೊರತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:22
19 ತಿಳಿವುಗಳ ಹೋಲಿಕೆ  

ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಯುವ ಹೋಮಶೇಷವು ಮಹಾಪರಿಶುದ್ಧವಾದುದು.


ದೇವಾಲಯದ ಸೇವೆಯಲ್ಲಿರುವವರು ದೇವಾಲಯದ ಆದಾಯದಿಂದ ಜೀವಿಸುತ್ತಾರೆ. ಬಲಿಪೀಠದ ಬಳಿ ಸೇವೆಮಾಡುವವರು ಅರ್ಪಿತವಾದ ಬಲಿಯಿಂದ ಪಾಲನ್ನು ಪಡೆಯುತ್ತಾರೆ. ಇದು ನಿಮಗೆ ತಿಳಿದಿದೆ.


“ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರಿಗೂ ಸಲ್ಲಬೇಕು. ಸದಾಕಾಲಕ್ಕೂ ಇದನ್ನು ನಾನು ನಿನಗೆ ಅನುಗ್ರಹಿಸಿದ್ದೇನೆ. ಇದು ನನ್ನ ಸನ್ನಿಧಿಯಲ್ಲಿ ನಿನ್ನೊಡನೆ ಮತ್ತು ನಿನ್ನ ಸಂತತಿಯೊಡನೆ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”


“ಪ್ರಾಯಶ್ಚಿತ್ತ ಬಲಿ ನಿಯಮಗಳು ಹೀಗಿವೆ: ಈ ಬಲಿ ಮಹಾಪರಿಶುದ್ಧವಾದುದು.


ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶಜರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಕೆಯಾದದ್ದು ಮಹಾಪರಿಶುದ್ಧವಾದುದು.


ಯಾಜಕರಲ್ಲಿ ಗಂಡಸರೆಲ್ಲರು ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದುದು.


ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ಅನ್ಯದೇಶದವನಿಂದ ತೆಗೆದುಕೊಂಡ ಅಂಥ ಪ್ರಾಣಿಯನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು. ಅದು ಕುಂದುಳ್ಳದ್ದು, ಕಳಂಕಿತವಾದದ್ದು. ಆದಕಾರಣ ಸ್ವೀಕೃತವಾಗದು.”


ಯಾಜಕನು ನಾರುಮಡಿಯ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರುಮಡಿ ಚಡ್ಡಿಯನ್ನು ಹಾಕಿಕೊಂಡು ಬಲಿಪೀಠದ ಮೇಲಿನ ದಹನಬಲಿ ದ್ರವ್ಯದ ಬೂದಿಯನ್ನು ಎತ್ತಿ ವೇದಿಕೆಯ ಬಳಿ ಇಡಬೇಕು.


ಹೋಮ ಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರು ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ತಿನ್ನಬೇಕು.


ಮೋಶೆ ಆರೋನನಿಗೂ ಅವನ ಉಳಿದ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಅವರಿಗೆ ಹೀಗೆಂದು ಹೇಳಿದನು: “ಸರ್ವೇಶ್ವರನಿಗೆ ದಹನ ಬಲಿದಾನವಾಗಿ ಸಮರ್ಪಿತವಾದ ದ್ರವ್ಯಗಳಲ್ಲಿ ಮಿಕ್ಕಿರುವ ನೈವೇದ್ಯ ದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಬಲಿಪೀಠದ ಬಳಿಯಲ್ಲಿ ಊಟಮಾಡಿ.


“ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ?


ದೋಷಪರಿಹಾರಕ ಬಲಿಪ್ರಾಣಿಯನ್ನೂ ದಹನ ಬಲಿಪ್ರಾಣಿಯನ್ನೂ ವಧಿಸುವ ಸ್ಥಳದಲ್ಲೇ, ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರನ್ನು ವಧಿಸಬೇಕು. ಏಕೆಂದರೆ ದೋಷಪರಿಹಾರಕ ಬಲಿದ್ರವ್ಯದಂತೆಯೇ ಪ್ರಾಯಶ್ಚಿತ್ತ ಬಲಿದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು;


ಹೊತ್ತು ಮುಳುಗಿದ ನಂತರ ಅವನು ಶುದ್ಧನಾಗಿ ನೈವೇದ್ಯ ಪದಾರ್ಥಗಳನ್ನು ಊಟಮಾಡಬಹುದು. ಏಕೆಂದರೆ ಅದು ಅವನ ಜೀವನಾಂಶ.


“ಯಾರಾದರು ನರಮಾನವನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ, ಬೇರೆ ಯಾವುದನ್ನೇ ಆಗಲಿ ಯಾವ ಶರತ್ತೂ ಇಲ್ಲದೆ ಸಂಪೂರ್ಣವಾಗಿ ಸರ್ವೇಶ್ವರನದಾಗಿರಲು ಹರಕೆ ಮಾಡಿಕೊಟ್ಟರೆ ಅದನ್ನು ಮಾರಲೂಕೂಡದು, ಬಿಡಿಸಿಕೊಳ್ಳಲೂಬಾರದು. ಸಂಪೂರ್ಣ ಸರ್ವೇಶ್ವರನದಾಗಿರಲು ಸಮರ್ಪಿಸುವಂಥದೆಲ್ಲಾ ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು