Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:9 - ಕನ್ನಡ ಸತ್ಯವೇದವು C.L. Bible (BSI)

9 ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟು ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯಾಜಕನ ಮಗಳು ವೇಶ್ಯೆಯಾಗಿದ್ದರೆ, ಅವಳು ತನ್ನ ಗೌರವವನ್ನು ಹಾಳುಮಾಡಿಕೊಂಡವಳೂ ತನ್ನ ತಂದೆಗೆ ಅವಮಾನವನ್ನು ಉಂಟುಮಾಡಿದವಳೂ ಆಗಿದ್ದಾಳೆ. ಅವಳನ್ನು ಸುಟ್ಟುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಯಾವುದೇ ಯಾಜಕನ ಮಗಳು ವ್ಯಭಿಚಾರ ಕೃತ್ಯದಿಂದ ತನ್ನನ್ನು ಅಪವಿತ್ರ ಮಾಡಿಕೊಂಡರೆ, ಅವಳು ತನ್ನ ತಂದೆಯನ್ನು ಅಗೌರವಿಸಿದ್ದಾಳೆ. ಅವಳನ್ನು ಬೆಂಕಿಯಿಂದ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:9
16 ತಿಳಿವುಗಳ ಹೋಲಿಕೆ  

ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.


“ಮಗಳನ್ನು ಬಸವಿಬಿಟ್ಟು ವೇಶ್ಯೆಯನ್ನಾಗಿ ಮಾಡಬೇಡ. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ನಾಡಿನಲ್ಲೆಲ್ಲಾ ತುಂಬಿಹೋಗುವುದು.


ನಾನು ಕೊಟ್ಟ ಸಲಹೆಗಳನ್ನು ಜ್ಞಾಪಿಸಿಕೋ; ಸಭಾಹಿರಿಯನು ನಿಂದಾರಹಿತನೂ ಏಕಪತ್ನಿ ವ್ರತಸ್ಥನೂ ಆಗಿರಬೇಕು. ಆತನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ಸ್ವೇಚ್ಛಾಚಾರಿಗಳಾಗಿರಬಾರದು, ಅವಿಧೇಯರಾಗಿರಬಾರದು.


ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಇದೆಲ್ಲಾ ನೆರವೇರುವುದು ಎಂಬುದಕ್ಕೆ ಗುರುತಾಗಿ ನಿನ್ನ ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ್ ಒಂದೇ ದಿನದಲ್ಲಿ ಸಾಯುವರು.


ಹೀಗೆ ಸರ್ವೇಶ್ವರನ ನೈವೇದ್ಯವನ್ನು ತುಚ್ಛವಾಗಿ ಕಾಣುತ್ತಿದ್ದುದರಿಂದ ದೇವರ ದೃಷ್ಟಿಯಲ್ಲಿ ಏಲಿಯ ಮಕ್ಕಳ ಪಾಪ ಘೋರವಾಗಿತ್ತು.


ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.


ಯಾವನು ಮೀಸಲಾದ ವಸ್ತುವನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ತನ್ನ ಆಸ್ತಿಪಾಸ್ತಿ ಸಹಿತವಾಗಿ ಸುಡಲ್ಪಡಬೇಕು. ಏಕೆಂದರೆ ಅವನು ಸರ್ವೇಶ್ವರನ ಕಟ್ಟಳೆಯನ್ನು ಮೀರಿ ಇಸ್ರಯೇಲರಲ್ಲಿ ಭ್ರಷ್ಟಾಚಾರವನ್ನು ನಡೆಸಿದ್ದಾನೆ,’ ಎಂದು ಹೇಳು.”


ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.


ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು.


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು