Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:21 - ಕನ್ನಡ ಸತ್ಯವೇದವು C.L. Bible (BSI)

21 ಹರಕೆಯಾಗಿ ಅಥವಾ ಕಾಣಿಕೆಯಾಗಿ ಯಾರಾದರು ಶಾಂತಿಸಮಾಧಾನದ ಬಲಿಯನ್ನರ್ಪಿಸಲು ಆಶಿಸಿದರೆ ಅವರು ತರುವ ದನಕರುಗಳು, ಆಡು ಕುರಿಗಳು ಕಳಂಕರಹಿತವಾಗಿರಬೇಕು. ಯಾವುದಾದರೂ ಕುಂದುಕೊರತೆ ಇದ್ದರೆ ಆ ಬಲಿದಾನ ಸ್ವೀಕೃತವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿಯಾಗಲಿ ಕಾಣಿಕೆಯಾಗಿಯಾಗಲಿ ದನವನ್ನು ಅಥವಾ ಆಡುಕುರಿಗಳನ್ನು ತಂದರೆ ಅವು ಸಮರ್ಪಕವಾಗುವದಕ್ಕೆ ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಒಬ್ಬನು ಸಮಾಧಾನಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:21
13 ತಿಳಿವುಗಳ ಹೋಲಿಕೆ  

‘ನೀವು ಅರ್ಪಿಸುವಂಥದ್ದು ಹೋರಿಯಾಗಿದ್ದರೆ, ಅದು ಸರ್ವಾಂಗಹೋಮವೇ ಆಗಿರಲಿ ಅಥವಾ ಹರಕೆಯ ಹಾಗೂ ಬೇರೆ ವಿಧವಾದ ಬಲಿಯೇ ಆಗಿರಲಿ,


ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.


“ಶಾಂತಿಸಮಾಧಾನಕ್ಕಾಗಿ ಸರ್ವೇಶ್ವರನಿಗೆ ಸಮರ್ಪಿಸುವ ಬಲಿಪ್ರಾಣಿ ಕುರಿ ಅಥವಾ ಆಡು ಆಗಿದ್ದರೆ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.


“ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.


“ನನ್ನ ಬಯಕೆ ಈಡೇರಲೆಂದು ಬಲಿಯರ್ಪಿಸಿದ್ದೇನೆ; ಇಂದೇ ನನ್ನ ಹರಕೆಯನ್ನು ತೀರಿಸಿದ್ದೇನೆ.


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,


ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.


ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು