Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:25 - ಕನ್ನಡ ಸತ್ಯವೇದವು C.L. Bible (BSI)

25 ಅನ್ಯದೇಶದವನಿಂದ ತೆಗೆದುಕೊಂಡ ಅಂಥ ಪ್ರಾಣಿಯನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು. ಅದು ಕುಂದುಳ್ಳದ್ದು, ಕಳಂಕಿತವಾದದ್ದು. ಆದಕಾರಣ ಸ್ವೀಕೃತವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅನ್ಯದೇಶದವನಿಂದ ತೆಗೆದುಕೊಂಡು ಅಂಥ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದದ್ದಲ್ಲ; ಆದಕಾರಣ ಸಮರ್ಪಕವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:25
12 ತಿಳಿವುಗಳ ಹೋಲಿಕೆ  

ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.


ಮೋಶೆಗೆ ಸರ್ವೇಶ್ವರ ಹೀಗೆಂದರು.


ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು