Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:32 - ಕನ್ನಡ ಸತ್ಯವೇದವು C.L. Bible (BSI)

32 ನನ್ನ ಪವಿತ್ರ ನಾಮದ ಘನತೆಗೆ ಕುಂದು ತರಬಾರದು. ಇಸ್ರಯೇಲರೆಲ್ಲರು ನನ್ನನ್ನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನನ್ನ ಪರಿಶುದ್ಧ ನಾಮದ ಘನತೆಗೆ ಕುಂದುತರಬಾರದು; ಇಸ್ರಾಯೇಲ್ಯರಲ್ಲಿ ನಾನು ಪರಿಶುದ್ಧನೆಂದೆಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನನ್ನ ಪರಿಶುದ್ಧವಾದ ಹೆಸರನ್ನು ಅಪರಿಶುದ್ಧಗೊಳಿಸಬಾರದು, ಏಕೆಂದರೆ ಇಸ್ರಾಯೇಲರ ಮಧ್ಯದಲ್ಲಿ ನಾನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:32
16 ತಿಳಿವುಗಳ ಹೋಲಿಕೆ  

ನಿಮ್ಮ ಪವಿತ್ರನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ.


ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ.


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


“ಆರೋನನು ಮತ್ತು ಅವನ ಮಕ್ಕಳು ತಾವು ಅಶುದ್ಧರಾಗಿರುವಾಗ ಇಸ್ರಯೇಲರಿಂದ ನನಗೆ ಸಮರ್ಪಿತವಾದ ಪರಿಶುದ್ಧ ಪದಾರ್ಥಗಳನ್ನು ಮುಟ್ಟಬಾರದೆಂದು ಆಜ್ಞಾಪಿಸು. ಅವರು ನನ್ನ ಪವಿತ್ರನಾಮದ ಘನತೆಗೆ ಕುಂದುತರಬಾರದು. ನಾನು ಸರ್ವೇಶ್ವರ.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಇಲ್ಲವಾದರೆ ಅವನ ಸಂತತಿ ಸ್ವಜನರೊಳಗೆ ಅಪವಾದಕ್ಕೆ ಗುರಿಯಾಗುವುದು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪವಿತ್ರಜನರಾಗುವಂತೆ ಮಾಡುವ ಸರ್ವೇಶ್ವರ.


ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


“ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.


ನಿಮಗೆ ದೇವರಾಗಿರಬೇಕೆಂದು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದೆ. ನಾನು ಸರ್ವೇಶ್ವರ.


ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು