Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:13 - ಕನ್ನಡ ಸತ್ಯವೇದವು C.L. Bible (BSI)

13 ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:13
15 ತಿಳಿವುಗಳ ಹೋಲಿಕೆ  

ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.


ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಸರ್ವೇಶ್ವರನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತ ನಿಯಮ.


ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಮೂವತ್ತು ಸೇರು ಗೋದಿಹಿಟ್ಟನ್ನೂ ಆರಾರು ಸೇರು ಎಣ್ಣೆಯನ್ನೂ ಧಾನ್ಯ ನೈವೇದ್ಯಕ್ಕಾಗಿ ಒಪ್ಪಿಸಬೇಕು.


ಮತ್ತು ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.


ನೀವು ಸಬ್ಬತ್ ದಿನದಂದು ಹೆಚ್ಚಾಗಿ ಎರಡು ಕಳಂಕರಹಿತವಾದ ವರ್ಷದ ಕುರಿಗಳನ್ನು ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಆರು ಸೇರು ಗೋದಿಹಿಟ್ಟನ್ನು ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


“ಆರೋನನಿಗೆ ಅಭಿಷೇಕವಾದ ದಿನ ಮೊದಲ್ಗೊಂಡು ಅವನೂ ಅವನ ವಂಶಜರೂ ಸರ್ವೇಶ್ವರನಿಗೆ ಸಮರ್ಪಿಸಬೇಕಾದ ಧಾನ್ಯನೈವೇದ್ಯದ ಕ್ರಮ ಇದು: ಅವರು ದಿನನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಬೆಳಿಗ್ಗೆ ಅರ್ಧ, ಸಂಜೆ ಅರ್ಧ, ಸಮರ್ಪಿಸಬೇಕು.


ಅದಕ್ಕೆ ನಾಲ್ಕು ಲೀಟರು ಓಲಿವ್ ಎಣ್ಣೆಯನ್ನು ಕೂಡಿಸಬೇಕು.


ಆ ವೇದಿಕೆಯ ಮೇಲೆ ಬೇರೆ ಯಾವ ಅಪವಿತ್ರ ಧೂಪವನ್ನೂ ಹಾಕಕೂಡದು. ಅದರ ಮೇಲೆ ದಹನಬಲಿಯನ್ನಾಗಲಿ, ಅನ್ನಪಾನ ದ್ರವ್ಯಗಳನ್ನಾಗಲಿ ಅರ್ಪಿಸಕೂಡದು.


ನೀವು ಒಂದು ವರ್ಷದ ಕಳಂಕರಹಿತವಾದ ಟಗರನ್ನು ದಹನಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು