Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:19 - ಕನ್ನಡ ಸತ್ಯವೇದವು C.L. Bible (BSI)

19 ಅದಲ್ಲದೆ, ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನೂ, ಶಾಂತಿಸಮಾಧನದ ಬಲಿಯಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಒಂದು ವರುಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಪಾಪಪರಿಹಾರಕ ಸಮರ್ಪಣೆಯಾಗಿ ಒಂದು ಹೋತವನ್ನೂ ಸಮಾಧಾನಯಜ್ಞವಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತರುವಾಯ ಹೋತವನ್ನು ಪಾಪ ಪರಿಹಾರದ ಬಲಿಯಾಗಿಯೂ ಮತ್ತು ಸಮಾಧಾನ ಬಲಿಯಾಗಿ ಒಂದು ವರ್ಷದ ಎರಡು ಕುರಿಮರಿಗಳನ್ನು ಬಲಿಯಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:19
10 ತಿಳಿವುಗಳ ಹೋಲಿಕೆ  

ಮತ್ತು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.


ಆ ರೊಟ್ಟಿಗಳೊಡನೆ ಒಂದು ವರ್ಷದ ಕಳಂಕರಹಿತವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯನ್ನುಂಟುಮಾಡುವ ದಹನಬಲಿದಾನಗಳಾಗುವುವು.


ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು