Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:29 - ಕನ್ನಡ ಸತ್ಯವೇದವು C.L. Bible (BSI)

29 ಯಾವನಾದರು ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನು ಕುಲದಿಂದ ತೆಗೆದು ಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಈ ದಿನದಲ್ಲಿ ಯಾವನಾದರೂ ಉಪವಾಸ ಮಾಡದಿದ್ದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:29
14 ತಿಳಿವುಗಳ ಹೋಲಿಕೆ  

ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.


“ಕುಷ್ಠರೋಗಿಗಳಂಥ ಎಲ್ಲ ಅಂಟುರೋಗಿಗಳನ್ನು ಮೇಹಸ್ರಾವವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಯೇಲರಿಗೆ ಆಜ್ಞಾಪಿಸು.


ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿದಿನವಾಗಿರಬೇಕು. ಅಂದು ಉಪವಾಸದಿಂದಿರಬೇಕು. ಆ ತಿಂಗಳಿನ ಒಂಬತ್ತನೆಯ ದಿನದ ಸಂಜೆ ಪ್ರಾರಂಭಿಸಿ ಮರುದಿನದ ಸಂಜೆಯವರೆಗೆ ನೀವು ಆ ವಿರಾಮ ದಿನವನ್ನು ಆಚರಿಸಬೇಕು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.


ಆ ಪ್ರವಾದಿಗೆ ಕಿವಿಗೊಡದವನು ದೇವಜನರಿಂದ ದೂರವಾಗಿ ನಾಶವಾಗುತ್ತಾನೆ,’ ಎಂದು ಮೋಶೆ ಹೇಳಿದ್ದಾನೆ.


ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸ ಪಾಳೆಯದ ಹೊರಗೆ ಇರಬೇಕು.


ಯಾವನಾದರು ಆ ದಿನ ಕಿಂಚಿತ್ತಾದರು ದುಡಿದರೆ ಅವನನ್ನು ಇಸ್ರಯೇಲರಿಂದ ಅಳಿಸಿಬಿಡುವೆನು.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


“ಶುದ್ಧವಾಗಿರುವವರೆಲ್ಲರು ಬಲಿಪ್ರಾಣಿಯ ಮಾಂಸವನ್ನು ತಿನ್ನಬಹುದು.


“ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು