Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:39 - ಕನ್ನಡ ಸತ್ಯವೇದವು C.L. Bible (BSI)

39 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದನಂತರ ಯೆಹೋವನು ನೇವಿುಸಿದ [ಪರ್ಣಶಾಲೆಗಳ] ಜಾತ್ರೆಯನ್ನು ಏಳು ದಿನಗಳವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನೂ ಮಾಡದೆ ಸಂಪೂರ್ಣವಿರಾಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:39
7 ತಿಳಿವುಗಳ ಹೋಲಿಕೆ  

“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.


“ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಪರ್ಣಕುಠೀರಗಳ ಜಾತ್ರೆಯನ್ನು ಆಚರಿಸಬೇಕು.


“ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು.


ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು.


ನೀನು ಏಳನೆಯ ತಿಂಗಳಿನ ಮೊದಲನೆಯ ದಿನ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.


ಸರ್ವೇಶ್ವರನಿಗೆ ಒಪ್ಪಿಸಬೇಕಾದ ಕಪ್ಪಕಾಣಿಕೆಗಳನ್ನೂ ಹರಕೆಗಳನ್ನೂ ಸಲ್ಲಿಸಬೇಕಲ್ಲದೆ, ಮೇಲೆ ಸೂಚಿಸಿರುವ ಹಬ್ಬಗಳಲ್ಲಿ ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ದಹನಬಲಿ, ನೈವೇದ್ಯದ್ರವ್ಯ, ಶಾಂತಿಸಮಾಧಾನದ ಬಲಿ, ಪಾನದ್ರವ್ಯ ಇವುಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಹೋಮಮಾಡಬೇಕು.


ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು