Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:40 - ಕನ್ನಡ ಸತ್ಯವೇದವು C.L. Bible (BSI)

40 ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಮೊದಲನೆಯ ದಿನದಲ್ಲಿ ಶ್ರೇಷ್ಠ ವೃಕ್ಷದ ಹಣ್ಣುಗಳನ್ನೂ ಖರ್ಜೂರ ಮರದ ಗರಿಗಳನ್ನೂ ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನೂ ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನೂ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳು ಸಂಭ್ರಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪ್ರಥಮ ದಿನದಲ್ಲಿ ನೀವು ಮರಗಳಿಂದ ಉತ್ತಮ ಹಣ್ಣುಗಳನ್ನೂ ಖರ್ಜೂರಮರದ ಗರಿಗಳನ್ನೂ ಎಲೆತುಂಬಿದ ಕೊಂಬೆಗಳನ್ನೂ ವಿಲೋಸಸ್ಯಗಳನ್ನೂ ತೆಗೆದುಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈ ಹಬ್ಬದ ದಿನವನ್ನು ಏಳು ದಿನಗಳವರೆಗೆ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:40
19 ತಿಳಿವುಗಳ ಹೋಲಿಕೆ  

ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.


ಜನಸಮೂಹದಲ್ಲಿ ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರದೆಲೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II


ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.


ಹೀಗೆ ಪ್ರತಿ ವರ್ಷ ಏಳುದಿನಗಳ ತನಕ ಈ ಉತ್ಸವವನ್ನು ಆಚರಿಸಬೇಕು. ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ. ಏಳನೆಯ ತಿಂಗಳಲ್ಲಿ ಇದನ್ನು ಆಚರಿಸಬೇಕು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಆ ನಾಡಿನಲಿ ಕಿನ್ನರಿಗಳನ್ನೆ ತೂಗುಹಾಕಿದೆವು I ನೀರವಂಜಿ ಮರಗಳಿಗೆ ಅವನ್ನು ನೇತುಹಾಕಿದೆವು II


ವೃದ್ಧಿಯಾಗುವರವರು ನೀರನಾಲೆ ಬದಿಯ ಪಚ್ಚೆಪಸಿರಂತೆ, ಹರಿವ ಕಾಲುವೆಗಳ ಬಳಿಯ ಜೊಂಡುಹುಲ್ಲಿನಂತೆ.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು