Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:14 - ಕನ್ನಡ ಸತ್ಯವೇದವು C.L. Bible (BSI)

14 ಆ ದೇವದೂಷಕನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನಾಡಿದ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರು ಅವನ ತಲೆಯ ಮೇಲೆ ಕೈಚಾಚಬೇಕು. ಅನಂತರ ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ದೂಷಿಸಿದವನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:14
16 ತಿಳಿವುಗಳ ಹೋಲಿಕೆ  

ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಎಸೆಯಬೇಕು. ತರುವಾಯ ಜನರೆಲ್ಲರೂ ಹಾಕಲಿ. ಹೀಗೆಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ಅಗ ಊರಿನವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದು ಹಾಕಿಬಿಡಬೇಕು. ಇಸ್ರಯೇಲರೆಲ್ಲರು ಕೇಳಿ ಭಯಪಡುವರು.


ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸ ಪಾಳೆಯದ ಹೊರಗೆ ಇರಬೇಕು.


ಆಗ ಮೋಶೆಗೆ ಸರ್ವೇಶ್ವರ ಹೀಗೆಂದು ತಿಳಿಸಿದರು:


ಆ ಪುರುಷನನ್ನು ಅಥವಾ ಆ ಸ್ತ್ರೀಯನ್ನು ಹಿಡಿದು, ಊರ ಹೊರಗೆ ತಂದು, ಕಲ್ಲುಬೀರಿ ಕೊಲ್ಲಬೇಕು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು