Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:5 - ಕನ್ನಡ ಸತ್ಯವೇದವು C.L. Bible (BSI)

5 “ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಕಿಲೋಗ್ರಾಂನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:5
18 ತಿಳಿವುಗಳ ಹೋಲಿಕೆ  

ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು.


ಅದರ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿ ರೊಟ್ಟಿಗಳನ್ನು ಕ್ರಮವಾಗಿ ಇರಿಸಿದನು.


ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?


ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು.


ಮೇಜು, ಅದರ ಉಪಕರಣಗಳು, ಕಾಣಿಕೆಯ ರೊಟ್ಟಿ ಇವುಗಳನ್ನೂ;


“ಸನ್ನಿಧಿ ಕಾಣಿಕೆಯ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಿ ಅದರ ಮೇಲೆ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು ಹಾಗೂ ದಾನ್ಯದ್ರವ್ಯಾರ್ಪಣೆಯ ಬಟ್ಟಲುಗಳನ್ನು ಅವರು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಗಳನ್ನು ಅದರ ಮೇಲೆ ಇಡಬೇಕು.


ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನದಲ್ಲಿ ಸರ್ವೇಶ್ವರನ ಸನ್ನಿಧಿಯಿಂದ ತೆಗೆಯಲಾದ ನೈವೇದ್ಯದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳಿರಲಿಲ್ಲ. ಆದುದರಿಂದ ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.


ಕೇಹಾತ್ಯ ಗೋತ್ರದ ಮಿಕ್ಕ ಸದಸ್ಯರು ಪ್ರತೀ ಸಬ್ಬತ್ ದಿನ ದೇವಾಲಯದಲ್ಲಿ ಸಮರ್ಪಿಸಲಾಗುತ್ತಿದ್ದ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಜವಾಬ್ದಾರಿ ಹೊಂದಿದ್ದರು.


ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.


ಈ ನಾಣ್ಯ, ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯ ಧಾನ್ಯ, ನೈವೇದ್ಯ ಇವುಗಳಿಗಾಗಿ; ಹಾಗು ನಿತ್ಯ ದಹನಬಲಿ ಮತ್ತು ಸಬ್ಬತ್‍ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ದಹನಬಲಿ, ಶಾಂತಿಸಮಾಧಾನ ಬಲಿ, ಇಸ್ರಯೇಲರ ದೋಷಪರಿಹಾರಾರ್ಥವಾದ ಬಲಿ, ಇವುಗಳಿಗಾಗಿ ಹಾಗು ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲ ಕೆಲಸಕಾರ್ಯಗಳಿಗಾಗಿ ವೆಚ್ಚವಾಗಬೇಕು;


ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು.


ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.


ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು