8 ಶಾಶ್ವತವಾದ ನಿಬಂಧನೆಯ ಮೇರೆಗೆ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮಪಡಿಸಿ ಅವುಗಳನ್ನು ಇಸ್ರಯೇಲರ ಪರವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.
8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲ್ಯರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.
“ಸನ್ನಿಧಿ ಕಾಣಿಕೆಯ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಿ ಅದರ ಮೇಲೆ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು ಹಾಗೂ ದಾನ್ಯದ್ರವ್ಯಾರ್ಪಣೆಯ ಬಟ್ಟಲುಗಳನ್ನು ಅವರು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಗಳನ್ನು ಅದರ ಮೇಲೆ ಇಡಬೇಕು.
ಈ ನಾಣ್ಯ, ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯ ಧಾನ್ಯ, ನೈವೇದ್ಯ ಇವುಗಳಿಗಾಗಿ; ಹಾಗು ನಿತ್ಯ ದಹನಬಲಿ ಮತ್ತು ಸಬ್ಬತ್ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ದಹನಬಲಿ, ಶಾಂತಿಸಮಾಧಾನ ಬಲಿ, ಇಸ್ರಯೇಲರ ದೋಷಪರಿಹಾರಾರ್ಥವಾದ ಬಲಿ, ಇವುಗಳಿಗಾಗಿ ಹಾಗು ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲ ಕೆಲಸಕಾರ್ಯಗಳಿಗಾಗಿ ವೆಚ್ಚವಾಗಬೇಕು;
ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.