Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:10 - ಕನ್ನಡ ಸತ್ಯವೇದವು C.L. Bible (BSI)

10 ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಐವತ್ತನೆಯ ವರುಷವನ್ನು ದೇವರಿಗೆ ಮೀಸಲಾದ ವರುಷವೆಂದು ಭಾವಿಸಿ ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂಬದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂವಿುಗಳಿಗೂ ಸ್ವಜನರ ಬಳಿಗೂ ಹೋಗಿ ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:10
30 ತಿಳಿವುಗಳ ಹೋಲಿಕೆ  

ಯೆರೆಮೀಯನಿಗೆ ಸರ್ವೇಶ್ವರನಿಂದ ಮತ್ತೊಂದು ವಾಣಿ ಉಂಟಾಯಿತು. ಇಷ್ಟರೊಳಗೆ ಅರಸ ಚಿದ್ಕೀಯನು ಮತ್ತು ಜೆರುಸಲೇಮಿನ ಜನರೆಲ್ಲರು ಸೇರಿ ಒಂದು ಒಪ್ಪಂದ ಮಾಡಿಕೊಂಡಿದ್ದರು.


ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.


ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ಮರಳಿ ನಿಮ್ಮ ವಶಕ್ಕೆ ಬರುವುವು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.


ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.


ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ II


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!


ಆ ಐವತ್ತನೆಯ ವರ್ಷದಲ್ಲಿ, ಅಂದರೆ ‘ಜೂಬಿಲಿ’ ಸಂವತ್ಸರದಲ್ಲಿ ನೀವು ಬಿತ್ತನೆ ಮಾಡಬಾರದು; ತಾನಾಗಿ ಬೆಳೆದ ಫಸಲನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ಕೃಷಿಮಾಡದೆ ಬಿಟ್ಟ ದ್ರಾಕ್ಷೀತೋಟದ ಹಣ್ಣನ್ನು ಸಂಗ್ರಹಿಸಬಾರದು.


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಅವನ ಮಕ್ಕಳೂ ಬಿಡುಗಡೆಯಾಗಬೇಕು.


ಆದರೆ ರಾಜನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆಮೇಲೆ ಅದು ಪುನಃ ರಾಜನ ವಶವಾಗುವುದು. ಆದರೆ ರಾಜನು ತನ್ನ ಮಕ್ಕಳಿಗೆ ಕೊಟ್ಟ ಸೊತ್ತು ಅವರಿಗೇ ಸೇರಿಬಿಡುವುದು.


ಆಗ ಅವನನ್ನೂ ಅವನ ಮಕ್ಕಳನ್ನೂ ಬಿಡುಗಡೆ ಮಾಡಬೇಕು; ಆಗ ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸೊತ್ತಿಗೂ ಹಿಂದಿರುಗಬಹುದು.


ತಮ್ಮ ತಮ್ಮ ಹೆಣ್ಣುಗಂಡು ಜೀತದಾರರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಜೀತಮಾಡಿಸಿಕೊಳ್ಳುವುದಿಲ್ಲ ಎಂಬ ಈ ಒಪ್ಪಂದಕ್ಕೆ ಸಮ್ಮತಿಸಿದ್ದ ಎಲ್ಲ ಅಧಿಕಾರಿಗಳೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಜೀತದಾರರನ್ನು ಬಿಡುಗಡೆಮಾಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು