Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:2 - ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನಿಗೆ ಸಬ್ಬತ್ ಕಾಲವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುತ್ತಿರುವ ದೇಶಕ್ಕೆ ನೀವು ಪ್ರವೇಶಿಸುವಿರಿ. ಆ ಸಮಯದಲ್ಲಿ ನೀವು ಭೂಮಿಗೆ ವಿಶ್ರಾಂತಿಯ ಸಮಯವಿರುವುದಕ್ಕೆ ಬಿಡಬೇಕು. ಇದು ಯೆಹೋವನನ್ನು ಸನ್ಮಾನಿಸುವುದಕ್ಕಾಗಿರುವ ವಿಶೇಷವಾದ ವಿಶ್ರಾಂತಿಯ ಸಮಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ, ದೇಶವು ಯೆಹೋವ ದೇವರಿಗಾಗಿ ಸಬ್ಬತ್ ದಿನವನ್ನು ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:2
14 ತಿಳಿವುಗಳ ಹೋಲಿಕೆ  

ಈ ಪ್ರಕಾರ ಸರ್ವೇಶ್ವರ ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು; ನಾಡು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


“ಆರು ವರ್ಷ ನಿಮ್ಮ ಹೊಲಗದ್ದೆಗಳಲ್ಲಿ ಬಿತ್ತನೆಮಾಡಿ ಬೆಳೆತೆಗೆದುಕೊಳ್ಳಿ.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿದಿನವಾಗಿರಬೇಕು. ಅಂದು ಉಪವಾಸದಿಂದಿರಬೇಕು. ಆ ತಿಂಗಳಿನ ಒಂಬತ್ತನೆಯ ದಿನದ ಸಂಜೆ ಪ್ರಾರಂಭಿಸಿ ಮರುದಿನದ ಸಂಜೆಯವರೆಗೆ ನೀವು ಆ ವಿರಾಮ ದಿನವನ್ನು ಆಚರಿಸಬೇಕು.


“ನಿಮಗೆ ಸ್ವದೇಶವಾಗಿ ನಾನು ಕೊಡುವ ಕಾನಾನ್ ನಾಡಿಗೆ ನೀವು ಬಂದ ನಂತರ ಆ ನಾಡಿನ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಸೂಚಿಸುತ್ತೇನೋ


ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಹೇಳಿದರು:


ಆರು ವರ್ಷಗಳು ನೀವು ಹೊಲದಲ್ಲಿ ಬಿತ್ತನೆ ಮಾಡಬಹುದು. ದ್ರಾಕ್ಷಿತೋಟದ ಕೆಲಸವನ್ನು ಮಾಡಬಹುದು. ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು