Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:20 - ಕನ್ನಡ ಸತ್ಯವೇದವು C.L. Bible (BSI)

20 ಆದರೆ ಆ ಏಳನೆಯ ವರ್ಷದಲ್ಲಿ ಬಿತ್ತನೆ ಮಾಡುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆಯಿರುವುದಿಲ್ಲ. ಹಾಗಾದರೆ ಆ ವರ್ಷ ಏನು ತಿನ್ನಬೇಕೆಂದು ವಿಚಾರಿಸುತ್ತೀರೋ? ನಾನು ಹೇಳುವುದನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಏಳನೆಯ ವರುಷದಲ್ಲಿ ಬೀಜವನ್ನು ಬಿತ್ತುವದಕ್ಕಾಗಲಿ ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವದಕ್ಕಾಗಲಿ ಅಪ್ಪಣೆಯಿಲ್ಲವಲ್ಲಾ; ಆ ವರುಷದಲ್ಲಿ ಏನು ತಿನ್ನಬೇಕೆಂದು ವಿಚಾರಿಸುತ್ತೀರೋ? ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಒಂದುವೇಳೆ ನೀವು, ‘ನಾವು ಬೀಜಗಳನ್ನು ಬಿತ್ತದಿದ್ದರೆ ಅಥವಾ ಪೈರುಗಳನ್ನು ಸಂಗ್ರಹಿಸದಿದ್ದರೆ ಏಳನೆಯ ವರ್ಷದಲ್ಲಿ ನಮಗೆ ತಿನ್ನಲು ಏನೂ ಇರುವುದಿಲ್ಲ’ ಎಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು, “ನಾವು ಬಿತ್ತುವುದಿಲ್ಲ, ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವುದಿಲ್ಲ. ಏಳನೆಯ ವರ್ಷದಲ್ಲಿ ನಾವು ಏನು ತಿನ್ನೋಣ,” ಎನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:20
15 ತಿಳಿವುಗಳ ಹೋಲಿಕೆ  

ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.


ಆದರೆ ಏಳನೆಯ ವರ್ಷ ಯಾವ ವ್ಯವಸಾಯವನ್ನೂ ಮಾಡಬಾರದು. ಅದು ವಿಶ್ರಾಂತಿಕಾಲವಾಗಿಯೂ ಸರ್ವೇಶ್ವರನ ಗೌರವಾರ್ಥ ಸಬ್ಬತ್ ಕಾಲವಾಗಿಯೂ ಇರಬೇಕು. ಆ ವರ್ಷ ಹೊಲದಲ್ಲಿ ವ್ಯವಸಾಯ ಮಾಡಬಾರದು; ದ್ರಾಕ್ಷೀ ತೋಟದ ಕೆಲಸವನ್ನೂ ಕೈಬಿಡಬೇಕು.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಅಮಚ್ಯನು ಆ ದೈವಪುರುಷನನ್ನು, “ಹಾಗಾದರೆ ನಾನು ಇಸ್ರಯೇಲ್ ಸೈನ್ಯಕ್ಕಾಗಿ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟುಬಿಟ್ಟೆನಲ್ಲಾ, ಏನು ಮಾಡುವುದು?,” ಎಂದು ಕೇಳಿದನು. ಅವನು, “ಸರ್ವೇಶ್ವರ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಕೊಡಬಲ್ಲರು,” ಎಂದನು.


ಇವರು ನಿಷ್ಠೂರವಾಗಿ ಮಾತಾಡುತ್ತಾ ನನ್ನ ಬಳಿಗೆ ಬಂದು, ‘ತಿನ್ನಲಿಕ್ಕೆ ನಮಗೆ ಮಾಂಸವನ್ನು ಕೊಡು’ ಎಂದು ಕೇಳುತ್ತಿದ್ದಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸ ನನಗೆಲ್ಲಿ ದೊರಕೀತು.


ಇಸ್ರಯೇಲರೊಡನೆ ಪ್ರಯಾಣ ಮಾಡುತ್ತಿದ್ದ ಅನ್ಯಜನರು ಮಾಂಸಕ್ಕಾಗಿ ಹಂಬಲಿಸಿದರು. ಇಸ್ರಯೇಲರು ಕೂಡ, ಕಣ್ಣೀರಿಡುತ್ತಾ: “ಅಯ್ಯೋ, ನಮಗೆ ಮಾಂಸ ಕೊಡುವವರಾರು?


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ಭೂಮಿ ತಾನಾಗಿಯೇ ಬೆಳೆದದ್ದು ನಿಮಗೆ, ನಿಮ್ಮ ದಾಸದಾಸಿಯರಿಗೆ, ಕೂಲಿಯವರಿಗೆ


ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು