Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:24 - ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮಲ್ಲಿ ಮತ್ತೊಬ್ಬನ ಸೊತ್ತು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಹಕ್ಕು, ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮ್ಮಲ್ಲಿ ಮತ್ತೊಬ್ಬನ ಸ್ವಾಸ್ತ್ಯಭೂವಿು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜನರು ತಮ್ಮ ಭೂಮಿಯನ್ನು ಮಾರಿದರೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಅವರ ಕುಟುಂಬಕ್ಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಸ್ವಾಧೀನದಲ್ಲಿರುವ ನಿಮ್ಮ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:24
12 ತಿಳಿವುಗಳ ಹೋಲಿಕೆ  

ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ಕೋಟೆಯಿಲ್ಲದ ಊರುಗಳಲ್ಲಿರುವ ಮನೆಗಳಲ್ಲಿ ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದು. ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವುವು.


ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು, ಉಳಿದ ಅವಧಿಗೆ ಕ್ರಯಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.


“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.


ನಿಮ್ಮ ಸ್ವಜನರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರು ಮಾರಿಕೊಂಡರೆ ಅವನ ಸಮೀಪ ನೆಂಟನು ಇದನ್ನು ಬಿಡಿಸಿಕೊಳ್ಳಬೇಕು.


ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;


“ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನು ನಿನ್ನ ಬಳಿಗೆ ಬಂದು - ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಪರರ ಪಾಲಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನಗಿದೆ,’ - ಎಂದು ಹೇಳುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು