Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:39 - ಕನ್ನಡ ಸತ್ಯವೇದವು C.L. Bible (BSI)

39 ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ನಡೆಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ದಾಸನಂತೆ ನಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಒಂದುವೇಳೆ ನಿಮ್ಮ ಸ್ವದೇಶಸ್ಥನು ಬಹಳ ಬಡವನಾಗಿ ತನ್ನನ್ನು ಗುಲಾಮನನ್ನಾಗಿ ನಿಮಗೆ ಮಾರಿಕೊಂಡರೆ ನೀವು ಅವನನ್ನು ಗುಲಾಮನನ್ನಾಗಿ ದುಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ ‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:39
16 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಾದರು ಒಬ್ಬ ಇಬ್ರಿಯನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರ್ಷ ಗುಲಾಮನಾಗಿ ದುಡಿದು ಏಳನೆಯ ವರ್ಷ ‘ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.


ಆದರೆ ಅವನು ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿ, ಪರಿವಾರದವರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ, ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.


ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿ, ನಾವು ನಮ್ಮ ಗಂಡುಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣುಮಕ್ಕಳಲ್ಲಿ ಕೆಲವರನ್ನು ಈಗಾಗಲೇ ಅಪಹರಿಸಿದ್ದಾರೆ; ನಮ್ಮ ಪ್ರಯತ್ನವೇನೂ ಸಾಗುವುದಿಲ್ಲ; ನಮ್ಮ ಹೊಲತೋಟಗಳು ಪರಾಧೀನವಾಗಿವೆ,” ಎಂದು ಎಲ್ಲಾ ಗೊಣಗಿದರು.


ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.


ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸೊತ್ತಾಗಿ ಕೊಟ್ಟುಬಿಡಬಹುದು. ಅವರನ್ನು ಶಾಶ್ವತ ಜೀತದಾರರನ್ನಾಗಿ ಮಾಡಿಕೊಳ್ಳಬಹುದು. ಆದರೆ ಇಸ್ರಯೇಲರಾದ ನೀವೆಲ್ಲರು ಸಹೋದರರು. ಆದುದರಿಂದ ಒಬ್ಬರಿಂದೊಬ್ಬರು ಕ್ರೂರವಾಗಿ ಸೇವೆ ಮಾಡಿಸಿಕೊಳ್ಳಬಾರದು.


ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


(ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”


ಸೂರ್ಯೋದಯವಾದ ನಂತರ ಒಬ್ಬನು ಕಳ್ಳನನ್ನು ಹೊಡೆದುಕೊಂದರೆ ಅದು ನರಹತ್ಯವೇ ಸರಿ. ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಕೊಡಬೇಕು. ಅವನಲ್ಲಿ ಕೊಡಲು ಏನೂ ಇಲ್ಲದಿದ್ದರೆ ಮಾಡಿದ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.


ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.


ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.


ಇದೂ ಸಾಲದೆಂದು ನೀವು ಯೆಹೂದ್ಯರನ್ನೂ ಜೆರುಸಲೇಮನ್ನೂ ಬಲಾತ್ಕರಿಸಿ ದಾಸದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ಅಪರಾಧಗಳನ್ನು ನೀವೂ ಮಾಡಿದ್ದೀರಲ್ಲವೆ?


ಯೆರೆಮೀಯನಿಗೆ ಸರ್ವೇಶ್ವರನಿಂದ ಮತ್ತೊಂದು ವಾಣಿ ಉಂಟಾಯಿತು. ಇಷ್ಟರೊಳಗೆ ಅರಸ ಚಿದ್ಕೀಯನು ಮತ್ತು ಜೆರುಸಲೇಮಿನ ಜನರೆಲ್ಲರು ಸೇರಿ ಒಂದು ಒಪ್ಪಂದ ಮಾಡಿಕೊಂಡಿದ್ದರು.


ಅದರ ಪ್ರಕಾರ ಅವರಲ್ಲಿ ಪ್ರತಿ ಒಬ್ಬನು ತನ್ನ ಜೀತದಾರರಲ್ಲಿ ಹಿಬ್ರಿಯರಾದವರನ್ನು ಬಿಡುಗಡೆಮಾಡಬೇಕಿತ್ತು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಇನ್ನು ಮುಂದೆ ಜೀತದಾರರನ್ನಾಗಿ ಇರಿಸಿಕೊಳ್ಳದೆ ಅವರಿಗೆ ವಿಮೋಚನೆಯನ್ನು ಪ್ರಕಟಿಸಬೇಕೆಂಬುದು ಆ ಒಪ್ಪಂದವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು