Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:6 - ಕನ್ನಡ ಸತ್ಯವೇದವು C.L. Bible (BSI)

6 ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ಭೂಮಿ ತಾನಾಗಿಯೇ ಬೆಳೆದದ್ದು ನಿಮಗೆ, ನಿಮ್ಮ ದಾಸದಾಸಿಯರಿಗೆ, ಕೂಲಿಯವರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂವಿುಯಲ್ಲಿ ಹುಟ್ಟಿದ್ದು ನಿಮಗೂ ನಿಮ್ಮ ದಾಸದಾಸಿಯರಿಗೂ ಕೂಲಿಯವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಸಬ್ಬತ್ ವರ್ಷದಲ್ಲಿ ಭೂಮಿಯು ತಾನಾಗಿ ಫಲಿಸುವ ಬೆಳೆಯಿಂದ ನಿಮಗೆ ಸಾಕಷ್ಟು ಆಹಾರವಿರುವುದು. ನಿಮ್ಮ ದಾಸದಾಸಿಯರಿಗೂ ಸಾಕಷ್ಟು ಆಹಾರವಿರುವುದು. ನಿಮ್ಮ ದೇಶದಲ್ಲಿ ವಾಸವಾಗಿರುವ ಕೂಲಿಯಾಳುಗಳಿಗೂ ಪರದೇಶಸ್ಥರಿಗೂ ಸಾಕಷ್ಟು ಆಹಾರವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇಶದ ಆ ಸಬ್ಬತ್ ವರ್ಷದಲ್ಲಿ ತಾನಾಗಿಯೇ ಬೆಳೆದದ್ದು ನಿಮ್ಮ ಆಹಾರಕ್ಕಾಗಿ ಇರುವುದು. ಅದು ನಿಮಗೂ, ನಿಮ್ಮ ದಾಸದಾಸಿಯರಿಗೂ, ನಿಮ್ಮ ಕೂಲಿಯವರಿಗೂ, ನಿಮ್ಮೊಂದಿಗೆ ಪ್ರವಾಸಿಯಾಗಿರುವ ಪರಕೀಯರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:6
9 ತಿಳಿವುಗಳ ಹೋಲಿಕೆ  

ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಆದರೆ ಆ ಏಳನೆಯ ವರ್ಷದಲ್ಲಿ ಬಿತ್ತನೆ ಮಾಡುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆಯಿರುವುದಿಲ್ಲ. ಹಾಗಾದರೆ ಆ ವರ್ಷ ಏನು ತಿನ್ನಬೇಕೆಂದು ವಿಚಾರಿಸುತ್ತೀರೋ? ನಾನು ಹೇಳುವುದನ್ನು ಕೇಳಿ:


“ಆದರೆ ಏಳನೆಯ ವರ್ಷ ಆ ಭೂಮಿಯನ್ನು ಬೀಳುಬಿಡಿ. ನಿಮ್ಮ ನಾಡಿನ ಬಡವರು ಅದರಲ್ಲಿ ತಾನಾಗಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳಲ್ಲಿ ಹಾಗೂ ಎಣ್ಣೇ ಮರ ತೋಪುಗಳ ವಿಷಯದಲ್ಲೂ ಅದೇ ರೀತಿಯಾಗಿ ಮಾಡಿ.


ಹೊಲದಲ್ಲಿ ತಾನಾಗಿ ಬೆಳೆದ ಫಸಲನ್ನು ನೀವು ಕೂಡಿಸಿಟ್ಟುಕೊಳ್ಳಬಾರದು. ತಾನಾಗಿಯೇ ಬೆಳೆದ ದ್ರಾಕ್ಷಿ ಹಣ್ಣನ್ನು ಶೇಖರಿಸಿಟ್ಟುಕೊಳ್ಳಬಾರದು. ಆ ವರ್ಷ ಪೂರ್ತಿ ಭೂಮಿಗೆ ಸಂಪೂರ್ಣ ವಿಶ್ರಾಂತಿಯಿರಬೇಕು.


ಮತ್ತು ನಿಮ್ಮಲ್ಲಿ ತಂಗಿರುವ ಪರದೇಶಿಯರಿಗೆ ಹಾಗು ನಿಮ್ಮ ಪಶುಪ್ರಾಣಿಗಳಿಗೆ ಮತ್ತು ನಾಡಿನ ಕಾಡುಮೃಗಗಳಿಗೆ ಆಹಾರವಾಗಬಹುದು.


ಆರನೆಯ ವರ್ಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.


ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ ಹೀಗೆಂದನು: “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು: ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯ ಮಾಡಿ ಶೇಖರಿಸಿದ್ದನ್ನು ಅನುಭವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು