Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:9 - ಕನ್ನಡ ಸತ್ಯವೇದವು C.L. Bible (BSI)

9 ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನಿಮ್ಮ ದೇಶದಲ್ಲೆಲ್ಲಾ ಕೊಂಬಿನ ಧ್ವನಿಯನ್ನು ಮಾಡಿಸಬೇಕು; ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬಿನ ಧ್ವನಿಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶದಲ್ಲೆಲ್ಲಾ ಕೊಂಬನ್ನೂದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:9
20 ತಿಳಿವುಗಳ ಹೋಲಿಕೆ  

ನೀನು ಏಳನೆಯ ತಿಂಗಳಿನ ಮೊದಲನೆಯ ದಿನ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.


“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.


ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ಇಸ್ರಯೇಲರ ಜೂಬಿಲಿ ವರ್ಷವು ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಕುಲದ ಸೊತ್ತಿಗೆ ಸೇರಿಕೊಳ್ಳುತ್ತದೆ; ನಮ್ಮ ಕುಲದ ಸೊತ್ತಿನಿಂದ ವರ್ಗಾಯಿಸಲ್ಪಡುತ್ತದೆ,” ಎಂದು ಮೊರೆಯಿಟ್ಟರು.


ಇದಲ್ಲದೆ, ಉತ್ಸವ ದಿನಗಳಲ್ಲೂ ಹಬ್ಬ ದಿನಗಳಲ್ಲೂ ಅಮಾವಾಸ್ಯೆಯಲ್ಲೂ ಮತ್ತು ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಅರ್ಪಿಸುವಾಗಲೂ ಆ ಕಹಳೆಗಳನ್ನು ಮೊಳಗಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ನೆನಪಿಗೆ ತರಲು ನೆರವಾಗುವುದು. ನಾನೇ ನಿಮ್ಮ ದೇವರಾದ ಸರ್ವೇಶ್ವರ.”


ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ, ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವರಿಗೆ ಅದನ್ನು ಮರಳಿಸಬೇಕು.


ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದ್ದರೆ ಈ ಕ್ರಯ ಅಂತಿಮವಾಗಿರುವುದು.


ಏಕೆಂದರೆ ನೀವು ಪರಿಶುದ್ಧರಾಗುವಂತೆ ಈ ದಿನ ನಿಮ್ಮ ಪರವಾಗಿ ಪ್ರಾಯಶ್ಚಿತ್ತ ಮಾಡಲಾಗುವುದು. ಸರ್ವೇಶ್ವರನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವುವು.


ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಪೀಠ, ಇವುಗಳಿಗೋಸ್ಕರ ಆರೋನನು ದೋಷಪರಿಹಾರ ಮಾಡಿ ಮುಗಿಸಿದ ಮೇಲೆ, ಆ ಸಜೀವವಾದ ಹೋತವನ್ನು ತರಿಸಿ,


“ಅದಲ್ಲದೆ, ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲ, ಅಂದರೆ ನಾಲ್ವತ್ತೊಂಬತ್ತು ವರ್ಷಗಳು ಕಳೆದ ಮೇಲೆ


ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು.


ಆನಂದಿಸುವರವರು ಸದಾ ನಿನ್ನ ನಾಮದಲಿ I ಪ್ರವರ್ಧಿಸುವರವರು ನಿನ್ನ ನ್ಯಾಯನೀತಿಯಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು