Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:14 - ಕನ್ನಡ ಸತ್ಯವೇದವು C.L. Bible (BSI)

14 “ಆದರೆ ನೀವು ನನ್ನ ಮಾತನ್ನು ಕೇಳದೆ, ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಆದರೆ ನೀವು ನನಗೆ ಮತ್ತು ನನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗದಿದ್ದರೆ, ಕೆಟ್ಟ ಸಂಗತಿಗಳು ನಿಮಗೆ ಸಂಭವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ನೀವು ನನ್ನ ಮಾತನ್ನು ಕೇಳದೆ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:14
23 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಆ ಪ್ರವಾದಿಗೆ ಕಿವಿಗೊಡದವನು ದೇವಜನರಿಂದ ದೂರವಾಗಿ ನಾಶವಾಗುತ್ತಾನೆ,’ ಎಂದು ಮೋಶೆ ಹೇಳಿದ್ದಾನೆ.


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.


ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು.


ಆದರೆ ನೀವು ಸರ್ವೆಶ್ವರನ ಮಾತನ್ನು ಕೇಳದೆ, ಅವರ ಆಜ್ಞೆಗಳನ್ನು ಕೈಕೊಳ್ಳದೆ ನಡೆದರೆ, ಅವರ ಹಸ್ತ ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


ಆದರೆ ನೀವು ದ್ರೋಹಿಗಳಾಗಿ, ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈ ಮುಗಿಯುವುದಾದರೆ,


ದುರುಳರ ಮನೆಯನ್ನು ಸರ್ವೇಶ್ವರ ಶಪಿಸುವನು; ನೀತಿವಂತರ ನಿವಾಸವನ್ನು ಆತ ಆಶೀರ್ವದಿಸುವನು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.”


“ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ,


ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು.


ಆಗ ರಕ್ಷಾದಳದ ಆ ನಾಯಕ ಯೆರೆಮೀಯನನ್ನು ಕರೆಯಿಸಿ, “ನಿನ್ನ ದೇವರಾದ ಸರ್ವೇಶ್ವರನು ಈ ನಾಡಿಗೆ ಇಂಥ ಕೇಡು ಬಂದೊದಗಲಿ ಎಂದು ಶಾಪಹಾಕಿದ್ದ.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.


ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು.


“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


‘ಈ ನಾಡಿನ ಮೇಲೂ ಜನರ ಮೇಲೂ, ಜುದೇಯದ ಅರಸನ ಹಿಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲ ಶಾಪಗಳನ್ನು ಬರಮಾಡುವೆನು;


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು