Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:17 - ಕನ್ನಡ ಸತ್ಯವೇದವು C.L. Bible (BSI)

17 ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:17
30 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.


ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ ! ಅದರ ಶತ್ರುಗಳಿಗೋ ಸುಖಸಮೃದ್ಧಿ ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ !


ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡಿದರು. ಇಸ್ರಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.


ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.


ಅದರಂತೆಯೇ ಸುಮಾರು ಮೂರುಸಾವಿರ ಮಂದಿ ಹೋದರು. ಆದರೆ ಅವರು ಆಯಿ ಎಂಬ ಊರಿನವರನ್ನು ಎದುರಿಸಲಾಗದೆ ಓಡಿಬರಬೇಕಾಯಿತು.


“ತಮ್ಮ ಪಾಪಗಳ ಸಲುವಾಗಿ ಶತ್ರುಗಳ ಮುಂದೆ ತಲೆತಗ್ಗಿಸಬೇಕಾಗುವ ನಿಮ್ಮ ಪ್ರಜೆಗಳಾದ ಇಸ್ರಯೇಲರು ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಎತ್ತಿ ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,


ಶತ್ರುಗಳಿಗೆ ಬೆಂಗೊಟ್ಟು ನಾವೋಡುವಂತೆ ಮಾಡಿರುವೆ I ಹಗೆಗಳು ಹಾಯಾಗಿ ಸೊತ್ತನು ಸೂರೆಮಾಡ ಬಿಟ್ಟಿರುವೆ II


“ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು.


ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.


ಹದಿನೆಂಟು ವರ್ಷಕಾಲ ಇಸ್ರಯೇಲರು ಅವನಿಗೆ ಗುಲಾಮರಾಗಿದ್ದರು.


ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.


ಆದರೆ ನೀವು ಸರ್ವೆಶ್ವರನ ಮಾತನ್ನು ಕೇಳದೆ, ಅವರ ಆಜ್ಞೆಗಳನ್ನು ಕೈಕೊಳ್ಳದೆ ನಡೆದರೆ, ಅವರ ಹಸ್ತ ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


ಆದುದರಿಂದ ಸರ್ವೇಶ್ವರಸ್ವಾಮಿ ಇಸ್ರಯೇಲರ ಮೇಲೆ ಕೋಪಗೊಂಡು, ಅವರನ್ನು ಸಿರಿಯಾದವರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದರು. ಇಸ್ರಯೇಲರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಸಿರಿಯಾದವರ ಕೈಕೆಳಗಿದ್ದರು.


ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ದೇವರು ತನ್ನ ಪ್ರಜೆಗೆ ಮರಳಿ ಸಿರಿಸಂಪದ I ನೀಡಲಿ ಯಕೋಬ ಮೇಣ್ ಇಸ್ರಯೇಲ ಜನತೆಗೆ ಹರ್ಷಾನಂದ II


ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು