Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:34 - ಕನ್ನಡ ಸತ್ಯವೇದವು C.L. Bible (BSI)

34 ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆಸೇರಿಸುವಾಗಲೆಲ್ಲಾ ನಿಮ್ಮ ನಾಡು ಹಾಳುಬಿದ್ದು, ತನಗೆ ಸಲ್ಲಬೇಕಾದ ಸಬ್ಬತ್ ಕಾಲವನ್ನು ಅನುಭವಿಸುವುದು. ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಸವಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್‍ಕಾಲವನ್ನು ಅನುಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನೀವು ನಿಮ್ಮ ವೈರಿಗಳ ದೇಶಕ್ಕೆ ಒಯ್ಯಲ್ಪಟ್ಟಾಗ, ನಿಮ್ಮ ದೇಶ ಬರಿದಾಗುವುದಲ್ಲದೆ ಭೂಮಿಯು ಹಾಳುಬಿದ್ದು ವಿಶ್ರಾಂತಿಯನ್ನು ಅನುಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ನಾಡು ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವವರೆಗೂ, ನಾಡು ತನ್ನ ಸಬ್ಬತ್ ಕಾಲವನ್ನು ಅನುಭವಿಸುವುದು. ಆಗ ನೆಲವು ವಿಶ್ರಮಿಸಿಕೊಂಡು ತನ್ನ ವಿಶ್ರಾಂತಿಯ ಕಾಲವನ್ನು ಅನುಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:34
7 ತಿಳಿವುಗಳ ಹೋಲಿಕೆ  

ಈ ಪ್ರಕಾರ ಸರ್ವೇಶ್ವರ ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು; ನಾಡು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


ಆದರೆ ಅವರು ಬಿಟ್ಟುಹೋದ ಸ್ವಂತ ನಾಡು ಮೊಟ್ಟಮೊದಲು ನಿರ್ಜನವಾಗಬೇಕು; ಅದು ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು; ಅವರು ಸರ್ವೇಶ್ವರನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣ ತಮ್ಮ ಪಾಪದ ಫಲವನ್ನು ಸವಿಯಬೇಕು.


ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.


ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ದೊರಕದ ಸಕಾಲದ ವಿಶ್ರಾಂತಿಯನ್ನು ಅದು ಹಾಳುಬಿದ್ದಿರುವ ದಿನಗಳಲ್ಲಿ ಸುದೀರ್ಘವಾಗಿ ಅನುಭವಿಸುವುದು.


“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ, ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು