Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:40 - ಕನ್ನಡ ಸತ್ಯವೇದವು C.L. Bible (BSI)

40 “ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ತಾವು ನನಗೆ ವಿರೋಧವಾಗಿ ನಡೆದದ್ದರಿಂದಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಒಂದುವೇಳೆ ಜನರು ತಮ್ಮ ಪಾಪಗಳನ್ನೂ ತಮ್ಮ ಪೂರ್ವಿಕರ ಪಾಪಗಳನ್ನೂ ಅರಿಕೆ ಮಾಡಬಹುದು; ನನಗೆ ವಿರುದ್ಧವಾಗಿ ಪಾಪಮಾಡಿರುವುದಾಗಿಯೂ ನನಗೆ ವಿರೋಧವಾಗಿ ತಿರುಗಿರುವುದಾಗಿಯೂ ಅವರು ಒಪ್ಪಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ ‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:40
30 ತಿಳಿವುಗಳ ಹೋಲಿಕೆ  

ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಅವರು ತಮ್ಮ ಅಪರಾಧವನ್ನು ಒಪ್ಪಿಕೊಳ್ಳಬೇಕು. ಅಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು,


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.


“ಈ ವಿಷಯಗಳಲ್ಲಿ ಯಾರಾದರು ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.


ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.


ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು.


ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,


ನಿಮ್ಮ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೂ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗು ಪೂರ್ಣಪ್ರಾಣದಿಂದ, ನಿಮ್ಮನ್ನು ಪ್ರಾರ್ಥಿಸಿದರೆ,


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”


“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು