Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:45 - ಕನ್ನಡ ಸತ್ಯವೇದವು C.L. Bible (BSI)

45 ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತ ದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆ. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು, ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ, ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಮುಂದೆ ಈಜಿಪ್ಟಿನಿಂದ ಬರಮಾಡಿದೆನು. ನಾನೇ ಯೆಹೋವ ದೇವರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:45
26 ತಿಳಿವುಗಳ ಹೋಲಿಕೆ  

ನಾನು ನಿಮ್ಮ ದೇವರಾದ ಸರ್ವೇಶ್ವರ. ನಿಮಗೆ ದೇವರಾಗಿರಲು, ನಿಮಗೆ ಕಾನಾನ್ ನಾಡನ್ನು ನೀಡಲು, ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದವನು ನಾನೇ.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ನಿಮಗೆ ದೇವರಾಗಿರಬೇಕೆಂದು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದೆ. ನಾನು ಸರ್ವೇಶ್ವರ.


ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ?


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಆಗ ನಿಮ್ಮನ್ನೂ ಎಲ್ಲ ಜೀವರಾಶಿಗಳನ್ನೂ ಕುರಿತು ನಾನು ಮಾಡಿದ ಪ್ರತಿಜ್ಞೆಯನ್ನು ನೆನೆಸಿಕೊಳ್ಳುತ್ತೇನೆ. ಇನ್ನು ಮುಂದೆ ಜಲ ಹೆಚ್ಚಿ ಭೂಪ್ರಾಣಿಗಳನ್ನೆಲ್ಲಾ ಹಾಳುಮಾಡುವ ಪ್ರಳಯ ಬರುವುದಿಲ್ಲ.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ಇವರ ಮೊಂಡುತನ, ದುಷ್ಟತನ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಕೋಬರನ್ನು ನೆನಪಿಗೆ ತಂದುಕೊಳ್ಳಿ.


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು