Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:9 - ಕನ್ನಡ ಸತ್ಯವೇದವು C.L. Bible (BSI)

9 ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಬಳಿಕ ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:9
31 ತಿಳಿವುಗಳ ಹೋಲಿಕೆ  

ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.


ಹೆಚ್ಚಿಸಿದಿರಿ ಅವರ ಮಕ್ಕಳನು ಆಗಸದ ನಕ್ಷತ್ರಗಳಷ್ಟೆ; ಬರಮಾಡಿದಿರಿ ಆ ಮಕ್ಕಳನು ವಾಗ್ದತ್ತ ನಾಡಿಗೆ ‘ಅದ ಸೇರಿ, ವಶಮಾಡಿಕೊಳ್ಳಿ’ ಎಂದು ಹೇಳಿದಿರಾ ಪಿತೃಗಳಿಗೆ.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


“ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.


ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ನೀನೆಂದೆ, “ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ I ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರವಾದ ಶಪಥ : II


ನಿಮ್ಮ ಸಂತಾನಕ್ಕೂ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.


ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.


ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ.


ಆದರೆ ನಿನ್ನೊಡನೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ನೀನು ಹೆಂಡತಿ, ಮಕ್ಕಳು ಹಾಗೂ ಸೊಸೆಯರ ಸಮೇತ ನಾವೆಯನ್ನು ಹತ್ತಬೇಕು.


ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.


ನಾನು ಅವರಿಗೆ, “ಪರಲೋಕದೇವರು ನಮಗೆ ಸಫಲತೆಯನ್ನು ಅನುಗ್ರಹಿಸುವರು. ಆದುದರಿಂದ ಅವರ ದಾಸರಾದ ನಾವು ಕೋಟೆಯ ಗೋಡೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಜೆರುಸಲೇಮಿನಲ್ಲಿ ಪಾಲಾಗಲಿ, ಹಕ್ಕಾಗಲಿ, ಸ್ಮಾರಕವಾಗಲಿ ಇರುವುದಿಲ್ಲ,” ಎಂದು ಉತ್ತರಕೊಟ್ಟೆ.


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.


ನನ್ನ ನಿಯಮಗಳನ್ನು ಅಲ್ಲಗಳೆದು, ನನ್ನ ವಿಧಿಗಳನ್ನು ತಳ್ಳಿಬಿಟ್ಟು, ನನ್ನ ಆಜ್ಞೆಗಳಿಗೆ ವಿಧೇಯರಾಗದೆ ನಿಬಂಧನೆಗಳನ್ನೂ ಮೀರಿ ನಡೆದರೆ


ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.


ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು.


ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ.


ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.


ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು