Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:17 - ಕನ್ನಡ ಸತ್ಯವೇದವು C.L. Bible (BSI)

17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದ್ದರೆ ಈ ಕ್ರಯ ಅಂತಿಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಬ್ಬನು ಜ್ಯೂಬಿಲಿ ಸಂವತ್ಸರದಲ್ಲಿ ತನ್ನ ಹೊಲವನ್ನು ಕೊಟ್ಟರೆ, ಆಗ ಅದರ ಬೆಲೆಯು ಯಾಜಕನು ತೀರ್ಮಾನಿಸಿದಷ್ಟು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:17
7 ತಿಳಿವುಗಳ ಹೋಲಿಕೆ  

“ಯಾವನಾದರು ತನ್ನ ಮನೆಯನ್ನು ಸರ್ವೇಶ್ವರನಿಗೆ ಮೀಸಲಾಗಿ ಪ್ರಟಿಷ್ಠಿಸಿದ್ದರೆ ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ಗೊತ್ತುಮಾಡಬೇಕು; ಯಾಜಕನು ಗೊತ್ತುಮಾಡಿದ ಬೆಲೆಯನ್ನು ಬದಲಾಯಿಸುವಂತಿಲ್ಲ.


“ಯಾವನಾದರು ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದಕ್ಕೆ ಬಿತ್ತನೆಬೀಜ ಎಷ್ಟು ಬೇಕಾಗುತ್ತದೆ ಎಂಬುದರ ಆಧಾರದ ಮೇಲೆ ನೀವು ಅದರ ಬೆಲೆಯನ್ನು ನಿರ್ಣಯಿಸಬೇಕು. ಇಪ್ಪತ್ತು ಕಿಲೋಗ್ರಾಂ ಜವೆಗೋಧಿಯನ್ನು ಬಿತ್ತಬಹುದಾದಂಥ ಭೂಮಿಗೆ ಐವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕಾಗುವುದು.


ಜೂಬಿಲಿ ಸಂವತ್ಸರದ ತರುವಾಯ ಭೂಮಿಯನ್ನು ಹರಕೆ ಮಾಡಿದರೆ, ಮುಂದಿನ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಮ್ಮಿಮಾಡಬೇಕು.


ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು.


ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.


ಆ ಐವತ್ತನೆಯ ವರ್ಷದಲ್ಲಿ, ಅಂದರೆ ‘ಜೂಬಿಲಿ’ ಸಂವತ್ಸರದಲ್ಲಿ ನೀವು ಬಿತ್ತನೆ ಮಾಡಬಾರದು; ತಾನಾಗಿ ಬೆಳೆದ ಫಸಲನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ಕೃಷಿಮಾಡದೆ ಬಿಟ್ಟ ದ್ರಾಕ್ಷೀತೋಟದ ಹಣ್ಣನ್ನು ಸಂಗ್ರಹಿಸಬಾರದು.


ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ಮರಳಿ ನಿಮ್ಮ ವಶಕ್ಕೆ ಬರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು