Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:21 - ಕನ್ನಡ ಸತ್ಯವೇದವು C.L. Bible (BSI)

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲ ಸರ್ವೇಶ್ವರನ ಸ್ವಕೀಯ ಹೊಲವಾದಂತೆ ಅವರ ಸೊತ್ತಾಗಿಯೇ ಇರಬೇಕು. ಅದು ಯಾಜಕರ ವಶದಲ್ಲಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನ ಸ್ವಕೀಯವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:21
11 ತಿಳಿವುಗಳ ಹೋಲಿಕೆ  

ಅವರು ಧಾನ್ಯ ನೈವೇದ್ಯವನ್ನೂ ದೋಷಪರಿಹಾರಕ ಬಲಿದ್ರವ್ಯವನ್ನೂ ಪ್ರಾಯಶ್ಚಿತ್ತ ಬಲಿದ್ರವ್ಯವನ್ನೂ ಅನುಭವಿಸಲಿ. ಸರ್ವೇಶ್ವರನದಾಗಿಯೇ ಇರಲೆಂದು ಇಸ್ರಯೇಲರು ಹರಕೆಮಾಡಿಕೊಡುವುದೆಲ್ಲವೂ ಅವರಿಗೆ ಸಲ್ಲಬೇಕು.


ಅವರು ನನಗೆ ಹರಕೆಮಾಡಿ ಅರ್ಪಿಸಿಕೊಡುವ ಪ್ರತಿಯೊಂದು ನಿನಗೆ ದಕ್ಕಬೇಕು.


ಕೋಟೆಯಿಲ್ಲದ ಊರುಗಳಲ್ಲಿರುವ ಮನೆಗಳಲ್ಲಿ ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದು. ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವುವು.


ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು. ಆಗ ಆ ಭೂಮಿ ಮರಳಿ ಅವನ ವಶಕ್ಕೆ ಬರುವುದು.


ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.


ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು.


ಇದೂ ಇದರಲ್ಲಿರುವುದೆಲ್ಲವೂ ಸರ್ವೇಶ್ವರನಿಗೆ ಮೀಸಲಾಗಿ ಆಹುತಿಯಾಗತಕ್ಕದೆಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಸಂಗಡ ಮನೆಯಲ್ಲಿರುವವರೆಲ್ಲರು ಉಳಿಯಲಿ. ಏಕೆಂದರೆ ನಾವು ಕಳಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.


ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.


ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದಿಲ್ಲ.


“ಯಾವನಾದರು ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು, ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಹರಕೆಮಾಡಿ ಪ್ರತಿಷ್ಠಿಸಿದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು