Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ತರುವಾಯ ಒಬ್ಬನು ಯೆಹೋವನ ಸನ್ನಿಧಿಯಲ್ಲಿ ಹೋರಿಯನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:15
16 ತಿಳಿವುಗಳ ಹೋಲಿಕೆ  

ಅರ್ಪಿಸುವವನು ಆ ಪ್ರಾಣಿಯ ತಲೆಯ ಮೇಲೆ ಕೈಯಿಡಬೇಕು. ಆಗ ಅದು ಅವನ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಅಂಗೀಕೃತವಾಗುವುದು.


ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.


ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.


ಲೇವಿಯರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸು. ಇಸ್ರಯೇಲರು ಅವರ ಮೇಲೆ ತಮ್ಮ ಕೈಗಳನ್ನು ಇಡಲಿ.


ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಯೇಲರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ, ಅಪರಾಧಗಳನ್ನೂ, ಸರ್ವೇಶ್ವರನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಮರುಭೂಮಿಗೆ ಕಳಿಸಿಬಿಡಬೇಕು.


ಇದಾದ ಮೇಲೆ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ಮೋಶೆ ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.


ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಚಾಚಿದರು.


ಅವನು ಆ ಹೋರಿಯನ್ನು ಸರ್ವೇಶ್ವರನ ಸನ್ನಿಧಿಗೆ, ದೇವದರ್ಶನದ ಗುಡಾರದ ಬಾಗಿಲಿಗೆ, ತಂದು ಅದರ ತಲೆಯ ಮೇಲೆ ಕೈಯಿಟ್ಟು ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.


ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು, ಆರೋನ, ನಾದಾಬ್ ಹಾಗೂ ಅಬೀಹೂ ಮತ್ತು ಇಸ್ರಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಸರ್ವೇಶ್ವರನಾದ ನನ್ನ ಬಳಿಗೆ ಬಂದು ದೂರದಲ್ಲೆ ನಿಂತು ಅಡ್ಡಬೀಳಬೇಕು.


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ತಂದು


ತರುವಾಯ ಅವನು ದಹನ ಬಲಿಗಾಗಿ ಟಗರನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.


ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಸರ್ವೇಶ್ವರನಿಗೆ ಪಾಪಪರಿಹಾರಕ ಬಲಿಗಾಗಿ ಒಂದು ಹೋರಿಯನ್ನು, ಹಾಗು ದಹನಬಲಿಗಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಿ ಅವರಿಗಾಗಿ ಪಾಪಪರಿಹಾರವನ್ನು ಮಾಡು.


ಕಡೆಯಲ್ಲಿ ದೋಷಪರಿಹಾರಕ ಬಲಿಗಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಸಮಾಜದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನು ಚಾಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು