Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:2 - ಕನ್ನಡ ಸತ್ಯವೇದವು C.L. Bible (BSI)

2 “ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:2
18 ತಿಳಿವುಗಳ ಹೋಲಿಕೆ  

ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


ನಿಮ್ಮ ನಾಡಿನವರಲ್ಲಿ ಬೇರೆ ಯಾರಾದರು ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಸ್ತುತಿ ಶಾಪಗಳೆರಡೂ ಒಂದೇ ಬಾಯಿಂದ ಹೊರಡುತ್ತವೆ. ಪ್ರಿಯ ಸಹೋದರರೇ, ಇದು ತರವಲ್ಲ.


ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ಯೋನಾತಾನನಿಗೆ ತನ್ನತಂದೆ ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ ಕೈಯಿಂದ ತೆಗೆದು ತಿಂದನು. ಕೂಡಲೆ ಅವನ ಕಣ್ಣುಗಳು ಕಳೆಗೊಂಡವು.


“ಆ ಆಶ್ರಯನಗರಗಳ ವಿವರ ಹೀಗಿದೆ: ಯಾವನಾದರು ದ್ವೇಷವಿಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದರೆ, ಅವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


“ಮುಖ್ಯಾಧಿಕಾರಿಯೊಬ್ಬನು ತನ್ನ ದೇವರಾದ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


“ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ,


ಅನಂತರ ಅವನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಮಾಡಿದ್ದೇನು? ಯಾವ ತಪ್ಪಿಗಾಗಿ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಈ ಮಹಾ ಪಾತಕಕ್ಕೆ ಒಳಪಡಿಸಿದೆ? ಮಾಡಬಾರದ ಕಾರ್ಯವನ್ನು ನೀನು ಮಾಡಿದೆ,” ಎಂದು ಹೇಳಿದನು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:


“ಯಾಜಕನಲ್ಲದವನು ತಿಳಿಯದೆ ನೈವೇದ್ಯವಾದುದನ್ನು ಊಟಮಾಡಿದರೆ ಅಷ್ಟನ್ನೂ ಹಾಗು ಅದರ ಐದನೆಯ ಒಂದು ಭಾಗವನ್ನೂ ಯಾಜಕನಿಗೆ ತೆರಬೇಕು.


ಆಶ್ರಯಧಾಮಗಳಿಗಾಗಿ ಪಟ್ಟಣಗಳನ್ನು ನಿಗದಿಮಾಡಿರಿ. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.


ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.


ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು