ಯಾಜಕಕಾಂಡ 4:20 - ಕನ್ನಡ ಸತ್ಯವೇದವು C.L. Bible (BSI)20 ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿ |