Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:21 - ಕನ್ನಡ ಸತ್ಯವೇದವು C.L. Bible (BSI)

21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಜಕನು ಈ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ, ಆ ಮೊದಲನೆಯ ಹೋರಿಯನ್ನು ಸುಟ್ಟುಹಾಕಿದ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಇದು ಇಡೀ ಸಮೂಹದ ಪಾಪವನ್ನು ಪರಿಹಾರ ಮಾಡುವ ಸಮರ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:21
18 ತಿಳಿವುಗಳ ಹೋಲಿಕೆ  

ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ದೇಶಾಂತರದ ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಿಗೆ ತೊಂಬತ್ತಾರು ಟಗರುಗಳನ್ನು, ಎಪ್ಪತ್ತೇಳು ಕುರಿಮರಿಗಳನ್ನು, ಸಮಸ್ತ ಇಸ್ರಯೇಲರ ಪರವಾಗಿ ಹನ್ನೆರಡು ಹೋರಿಗಳನ್ನು ಹಾಗು ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನು ದಹನಬಲಿಗಾಗಿ ಸಮರ್ಪಿಸಿದರು. ಅಂತೆಯೇ ಇವೆಲ್ಲವೂ ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿತವಾದುವು.


ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಯೇಲರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ, ಅಪರಾಧಗಳನ್ನೂ, ಸರ್ವೇಶ್ವರನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಮರುಭೂಮಿಗೆ ಕಳಿಸಿಬಿಡಬೇಕು.


ಪ್ರಧಾನಯಾಜಕನು ಪಾಪಪರಿಹಾರಕ ಬಲಿಗಾಗಿ ಯಾವ ಪ್ರಾಣಿಗಳ ರಕ್ತವನ್ನು ಗರ್ಭಗುಡಿಗೆ ತರುತ್ತಾನೋ ಆ ಪ್ರಾಣಿಗಳ ದೇಹವನ್ನು ಪಾಳೆಯದಾಚೆ ಸುಡುವುದುಂಟು.


“ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ,


ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.


ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಹೋರಿಯ ಮಾಂಸವನ್ನು, ಚರ್ಮವನ್ನು ಹಾಗು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ಪಾಪಪರಿಹಾರಕ ಬಲಿದಾನ.


ಅನಂತರ ತನ್ನ ವಸ್ತ್ರಗಳನ್ನು ಬದಲಾಯಿಸಿಕೊಂಡು ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


“ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯ ದ್ರವ್ಯಗಳನ್ನು ನಿಶ್ಯೇಷವಾಗಿ ಹೋಮಮಾಡಿ ಬಿಡಬೇಕು; ಅದನ್ನು ತಿನ್ನಲೇಕೂಡದು.”


ಸರ್ವೇಶ್ವರನ ಆಜ್ಞಾನುಸಾರ ಆ ಪ್ರಾಣಿಯ ಮಿಕ್ಕ ಭಾಗಗಳನ್ನು, ಅಂದರೆ ಅದರ ಚರ್ಮ, ಮಾಂಸ ಹಾಗು ಕಲ್ಮಷಗಳನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.


ದೋಷಪರಿಹಾರಕ ಬಲಿಪ್ರಾಣಿಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ದೇಹಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.


ಆ ದಿನದಲ್ಲಿ ರಾಜನು ತನ್ನ ನಿಮಿತ್ತ ಹಾಗು ನಾಡಿನ ಜನರೆಲ್ಲರ ನಿಮಿತ್ತ ದೋಷಪರಿಹಾರಕಬಲಿಗಾಗಿ ಒಂದು ಹೋರಿಯನ್ನು ಒಪ್ಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು