Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:25 - ಕನ್ನಡ ಸತ್ಯವೇದವು C.L. Bible (BSI)

25 ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:25
18 ತಿಳಿವುಗಳ ಹೋಲಿಕೆ  

ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.


ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.


ಆರೋನನ ಮಕ್ಕಳು ಆ ಬಲಿಪ್ರಾಣಿಯ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಹೊಯ್ದನು.


ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.


ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು.


ನಿಮಗೆ ತಿಳಿದಿಲ್ಲವೋ, ನೀವು ಕೇಳಿಲ್ಲವೋ ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಪೃಥ್ವಿಸ್ಥಾಪನೆ ಹೇಗಾಯಿತೆಂದು ನೀವು ಗ್ರಹಿಸಿಲ್ಲವೋ?


ತರುವಾಯ ಅವನು ಹೊರಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿರುವ ಬಲಿಪೀಠದ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲೂ ಆ ಹೋತದ ರಕ್ತದಲ್ಲೂ ಸ್ವಲ್ಪ ಸ್ವಲ್ಪತೆಗೆದುಕೊಂಡು ಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.


ಅನಂತರ ಮೋಶೆ ಅಭಿಷೇಕದ ಎಣ್ಣೆಯನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನು ಹಾಗು ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಸರ್ವೇಶ್ವರನ ಸನ್ನಿಧಿಯಲ್ಲಿ, ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಬಲಿ.


ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲ ಬಲಿಪೀಠದ ಬುಡಕ್ಕೆ ಸುರಿಯಬೇಕು.


ಬಳಿಕ ದೋಷಪರಿಹಾರಾರ್ಥಕವಾದ ಆ ಹಕ್ಕಿಯ ರಕ್ತದಲ್ಲಿ ಸ್ವಲ್ಪವನ್ನು ಬಲಿಪೀಠದ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿ.


ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು