Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:35 - ಕನ್ನಡ ಸತ್ಯವೇದವು C.L. Bible (BSI)

35 ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯಜ್ಞವೇದಿಯಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:35
40 ತಿಳಿವುಗಳ ಹೋಲಿಕೆ  

ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.


ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.


ಯಾಜಕನು ಅವರಿಗೋಸ್ಕರ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವರು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾದರೋ ಆ ವಿಷಯದಲ್ಲಿ ಅವರಿಗೆ ಕ್ಷಮೆ ದೊರಕುವುದು.”


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು.


ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗಾಗಿ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.


ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.


ಅನಂತರ ಮೋಶೆ ಆರೋನನಿಗೆ, “ಬಲಿಪೀಠದ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಬಲಿಯನ್ನು ಮತ್ತು ದಹನಬಲಿಯನ್ನು ಸಮರ್ಪಿಸಿ ನಿನ್ನ ಹಾಗು ಜನರ ದೋಷವನ್ನು ಪರಿಹರಿಸು. ಜನರು ತಂದದ್ದನ್ನು ಸಮರ್ಪಿಸಿ ಸರ್ವೇಶ್ವರನ ಆಜ್ಞೆಯಂತೆ ಅವರ ದೋಷವನ್ನು ಪರಿಹರಿಸು,” ಎಂದು ಹೇಳಿದನು.


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”


ಮತ್ತೊಂದನ್ನು ವಿಧಿಯಾನುಸಾರ ದಹನಬಲಿ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.


ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ತಿಳಿಯದೆ ತಪ್ಪುಮಾಡಿದ ಅಂಥವನ ಪರವಾಗಿ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ವಿಧಿಯನ್ನು ನೆರವೇರಿಸಿದರೆ ಅವನಿಗೆ ಕ್ಷಮೆ ದೊರಕುವುದು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.


ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಿ ಅವನ ಪರವಾಗಿ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು