Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:6 - ಕನ್ನಡ ಸತ್ಯವೇದವು C.L. Bible (BSI)

6 ಆ ರಕ್ತದಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರ ಸ್ಥಾನದ ಮುಂದಿನ ತೆರೆಯ ಎದುರಿಗೆ, ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರಸ್ಥಾನದ ಮುಂದಣ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿವಿುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:6
22 ತಿಳಿವುಗಳ ಹೋಲಿಕೆ  

ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ ಸರ್ವೇಶ್ವರನ ಮುಂದೆ ನಡೆದರು. ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.


ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಯೇಲರಿಂದ ಅದಕ್ಕುಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.


ಆಗ ಆ ಹೋರಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.


ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.


ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಸರ್ವೇಶ್ವರನ ಸನ್ನಿಧಿಯಲ್ಲಿ ಚಿಮುಕಿಸಬೇಕು.


ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.


ಆರೋನನ ಮಕ್ಕಳು ಆ ಬಲಿಪ್ರಾಣಿಯ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಹೊಯ್ದನು.


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.


ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.


ಅದರಲ್ಲಿ ಬೆರಳನ್ನು ಅದ್ದಿ ತೆರೆಯ ಮುಂದೆ ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.


ತರುವಾಯ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದತ್ತ ಏಳುಸಾರಿ ಚಿಮುಕಿಸಬೇಕು.


“ಅದಲ್ಲದೆ, ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲ, ಅಂದರೆ ನಾಲ್ವತ್ತೊಂಬತ್ತು ವರ್ಷಗಳು ಕಳೆದ ಮೇಲೆ


ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.


ಸರ್ವೇಶ್ವರ ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಕೆಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು


ಬಲಿಪೀಠದ ಮೇಲೆ ಏಳು ಸಾರಿ ಆ ಎಣ್ಣೆಯನ್ನು ಚಿಮುಕಿಸಿ ಬಲಿಪೀಠವನ್ನು, ಅದರ ಎಲ್ಲ ಉಪಕರಣಗಳನ್ನು ಹಾಗು ನೀರಿನ ತೊಟ್ಟಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು