ಯಾಜಕಕಾಂಡ 5:17 - ಕನ್ನಡ ಸತ್ಯವೇದವು C.L. Bible (BSI)17 “ನಿಮ್ಮಲ್ಲಿ ಯಾರಾದರು ಸರ್ವೇಶ್ವರನು ವಿಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ಮಾಡಿ ದೋಷಕ್ಕೆ ಒಳಗಾದರೆ, ಅದು ಅವರಿಗೆ ತಿಳಿಯದೆ ಹೋದರೂ, ಅವರು ಅದರಿಂದ ಅಪರಾಧಿಯಾಗಿ ತಮ್ಮ ಪಾಪಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದಾದರೊಂದನ್ನು ಮಾಡಿ ದೋಷಕ್ಕೆ ಗುರಿಯಾಗಿದ್ದರೆ, ಅದು ಅವನಿಗೆ ತಿಳಿದಿಲ್ಲದಿದ್ದರೂ ಅವನು ಆ ಪಾಪಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು. ಅಧ್ಯಾಯವನ್ನು ನೋಡಿ |
“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.