Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:4 - ಕನ್ನಡ ಸತ್ಯವೇದವು C.L. Bible (BSI)

4 “ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಕೇಡಿಗಾಗಲಿ ಯಾವದಾದರೂ ಆಣೆಯಿಟ್ಟುಕೊಂಡರೆ ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:4
25 ತಿಳಿವುಗಳ ಹೋಲಿಕೆ  

ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.


ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ!” ಎಂದು ಪ್ರತಿಜ್ಞೆ ಮಾಡಿದ್ದನು.


ಆದರೆ ಗಂಡನು, ಕೇಳಿದಾಗಲೆ ಬೇಡವೆಂದು ಆಜ್ಞೆ ಮಾಡಿದರೆ ಆ ಹರಕೆ ಇಲ್ಲವೆ ಆ ಅವಿಚಾರ ಪ್ರತಿಜ್ಞೆ ನಿರರ್ಥಕವಾಗುತ್ತವೆ. ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ಇದನ್ನು ಕೇಳಿ ರಾಜನಿಗೆ ವ್ಯಥೆಯಾಯಿತು. ಆದರೆ ಅತಿಥಿಗಳ ಮುಂದೆ ಮಾಡಿದ ಪ್ರಮಾಣ ಮುರಿಯಲಾಗದೆ ಅವಳ ಇಚ್ಛೆಯನ್ನು ಪೂರೈಸುವಂತೆ ಆಜ್ಞೆಮಾಡಿದನು.


ಆಗ ಅವಳು ಏನು ಕೇಳಿದರೂ ಕೊಡುವುದಾಗಿ ಅವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದನು.


ಇದಲ್ಲದೆ ಅವನು, “ನಾನು ಈ ದಿನ ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಆಣೆಯಿಟ್ಟುಕೊಂಡನು.


ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಯೇಲರು ಶಾಪಗ್ರಸ್ತರಾಗಲಿ! ಎಂದು ಆಣೆಯಿಟ್ಟುಕೊಂಡಿದ್ದೇವೆ. ಇದರಿಂದ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ,”


ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟೆವಲ್ಲಾ,” ಎಂದು ಗೋಳಾಡಿದರು.


ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲೇ ಆನಂದಿಸಿರಿ; ಅವನು ನಿಮ್ಮಲ್ಲೇ ಆನಂದಿಸಲಿ.


ಯೆಹೋಶುವ ಅವರೊಡನೆ, “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಅಂತೆಯೇ ಪ್ರಮಾಣ ಮಾಡಿದರು.


ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.


“ಆಕೆ ಮಾಡಿದ ಹರಕೆ ಇಲ್ಲವೆ ಪರ್ಯಾಲೋಚಿಸದೆ ಮಾಡಿದ ಪ್ರತಿಜ್ಞೆ ಮುಗಿಯುವಷ್ಟರೊಳಗೆ ಅವಳಿಗೆ ಮದುವೆಯಾಯಿತೆಂದು ಇಟ್ಟುಕೊಳ್ಳೋಣ.


“ಮನುಷ್ಯ ದೇಹದಿಂದುಂಟಾದ ಯಾವುದಾದರು ಒಂದು ಅಶುದ್ಧ ವಸ್ತು ತಗುಲಿದ್ದು, ಅವನಿಗೆ ತಿಳಿಯದೆ ಹೋದರೂ, ತಿಳಿದು ಬಂದಾಗ ಅವನು ದೋಷಿಯಾಗುತ್ತಾನೆ.


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”


ನಿಂತರಾಗ ದೇವರಾತ್ಮನಿಗೆ ವಿರೋಧವಾಗಿ I ನುಡಿಯಬೇಕಾಯಿತು ಮೋಶೆಯು ಅವಿವೇಕವಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು